ಓದುಗರ ಪತ್ರ
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ. ಮನೆ ಬಾಗಿಲು ಮುಚ್ಚಿದ್ದರೆ ಮರು ಭೇಟಿ ನೀಡಿ ಮಾಹಿತಿ ಪಡೆಯುವುದು ನಿಮ್ಮ ಬದ್ಧತೆಯಾಗಿರಲಿ. ಊಹೆಗಳಿಗೆ ಅವಕಾಶ ನೀಡದೆ ವಾಸ್ತವವನ್ನೇ ಆಪ್ನಲ್ಲಿ ದಾಖಲಿಸಿ ಹಾಗೂ ಜನರ ಖಾಸಗಿ ಮಾಹಿತಿಯ ಗೌಪ್ಯತೆ ಕಾಪಾಡಿ.
ಆನ್ಲೈನ್ನಲ್ಲಿ ಮಾಹಿತಿ ನೀಡಿದವರಿಂದ ರೆಫರೆನ್ಸ್ ಸಂಖ್ಯೆ ಪಡೆದು ಕೆಲಸ ಸುಲಭವಾಗಿಸಿಕೊಳ್ಳಿ. ನಾಗರಿಕರು ನಿಖರ ಮಾಹಿತಿ ನೀಡಿ ಈ ರಾಷ್ಟ್ರೀಯ ಅಭಿಯಾನವನ್ನು ಯಶಸ್ವಿ ಗೊಳಿಸುವುದು ಅಗತ್ಯವಾಗಿದೆ. ಸಾರ್ವಜನಿಕರು ಏಪ್ರಿಲ್ ೧೫ರ ವರೆಗೆ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶವಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು. ತದನಂತರ ಏಪ್ರಿಲ್ ೧೬ರಿಂದ ಒಂದು ತಿಂಗಳ ಕಾಲ ಮೊದಲ ಹಂತವಾಗಿ ಮನೆಪಟ್ಟಿ ಹಾಗೂ ಮನೆಗಣತಿ ಕಾರ್ಯ ನಡೆಯಲಿದ್ದು, ಪ್ರತಿಯೊಬ್ಬರೂ ಗಣತಿದಾರರಿಗೆ ಸಹಕರಿಸಬೇಕು. ಈ ಬಗ್ಗೆ ಕಾಲರ್ ಟ್ಯೂನ್ ಹಾಗೂ ಸ್ವಚ್ಛತಾ ವಾಹನಗಳ ಮೂಲಕ ಜಾಗೃತಿ ಮೂಡಿಸುವುದು ಅಭಿಯಾನಕ್ಕೆ ಸಹಕಾರಿಯಾಗಿದೆ. ಮುಖ್ಯವಾಗಿ, ಗಣತಿಯಿಂದ ಸರ್ಕಾರಿ ಸೌಲಭ್ಯಗಳು ಅಥವಾ ರೇಷನ್ ಕಾರ್ಡ್ ರದ್ದಾಗುತ್ತದೆ ಎಂಬ ತಪ್ಪು ತಿಳಿವಳಿಕೆ ಬೇಡ. ನಿಮ್ಮ ಮಾಹಿತಿಯು ದೇಶದ ಭವಿಷ್ಯದಯೋಜನೆಗಳಿಗೆ ಮಾತ್ರ ಬಳಕೆಯಾಗಲಿದ್ದು, ಎಲ್ಲರೂ ಈ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳೋಣ. –ಬಿ. ಗಣೇಶ, ಕೆ. ಜಿ. ಕೊಪ್ಪಲು,
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…