ಓದುಗರ ಪತ್ರ

ಓದುಗರ ಪತ್ರ |ಚಾ. ನಗರ ಕ್ಷೇತ್ರ ಅಭಿವೃದಿಯಾಗಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ ಮುಂದೆ ಅನುದಾಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಚಾ. ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು, ಎಚ್. ಡಿ. ಕೋಟೆ, ತಿ. ನರಸೀಪುರ, ವರುಣ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಹಳ್ಳಿಗಳು ಅಭಿವೃದ್ಧಿಯಲ್ಲಿ ಹಿಂದು ಳಿದಿವೆ. ಈ ಗ್ರಾಮಗಳ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ಸೌಲಭ್ಯ ಕಲ್ಪಿಸುವ ಜತೆಗೆ ಕೃಷಿಗೆ ಬೇಕಾದ ಸಾಮಗ್ರಿಗಳು, ಬಿತ್ತನೆ ಬೀಜ, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಲು ಹಾಗೂ ಕ್ಷೇತ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ, ರೈಲು, ರಸ್ತೆ ಸಾರಿಗೆ ಅಭಿವೃದ್ಧಿ, ಶಿಕ್ಷಣ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿ, ಸ್ವಯಂ ಉದ್ಯೋಗ, ಕೈಗಾರಿಕಾ ಅಭಿವೃದ್ಧಿ, ನಿರಾಶ್ರಿತರಿಗೆ ಮನೆಗಳನ್ನು ಕಲ್ಪಿಸುವ ಜತೆಗೆ ಅಂಗನವಾಡಿ, ಶಾಲಾ, ಕಾಲೇಜುಗಳನ್ನು ಅಭಿವೃದ್ಧಿಗೊಳಿಸಿ, ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ೩,೦೦೦ ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದು ಶ್ಲಾಘನೀಯ. ಅದೇ ರೀತಿ ಕೇಂದ್ರ ಸರ್ಕಾರದಿಂದ ಅನುದಾನ ತರಲು ನಿರಂತರವಾಗಿ ಹೋರಾಟ ನಡೆಸಿ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಅವರು ಶ್ರಮಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago