ಓದುಗರ ಪತ್ರ

ಓದುಗರ ಪತ್ರ |ಚಾ. ನಗರ ಕ್ಷೇತ್ರ ಅಭಿವೃದಿಯಾಗಲಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ ಮುಂದೆ ಅನುದಾಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಚಾ. ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು, ಎಚ್. ಡಿ. ಕೋಟೆ, ತಿ. ನರಸೀಪುರ, ವರುಣ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಹಳ್ಳಿಗಳು ಅಭಿವೃದ್ಧಿಯಲ್ಲಿ ಹಿಂದು ಳಿದಿವೆ. ಈ ಗ್ರಾಮಗಳ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ಸೌಲಭ್ಯ ಕಲ್ಪಿಸುವ ಜತೆಗೆ ಕೃಷಿಗೆ ಬೇಕಾದ ಸಾಮಗ್ರಿಗಳು, ಬಿತ್ತನೆ ಬೀಜ, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಲು ಹಾಗೂ ಕ್ಷೇತ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ, ರೈಲು, ರಸ್ತೆ ಸಾರಿಗೆ ಅಭಿವೃದ್ಧಿ, ಶಿಕ್ಷಣ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿ, ಸ್ವಯಂ ಉದ್ಯೋಗ, ಕೈಗಾರಿಕಾ ಅಭಿವೃದ್ಧಿ, ನಿರಾಶ್ರಿತರಿಗೆ ಮನೆಗಳನ್ನು ಕಲ್ಪಿಸುವ ಜತೆಗೆ ಅಂಗನವಾಡಿ, ಶಾಲಾ, ಕಾಲೇಜುಗಳನ್ನು ಅಭಿವೃದ್ಧಿಗೊಳಿಸಿ, ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ೩,೦೦೦ ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದು ಶ್ಲಾಘನೀಯ. ಅದೇ ರೀತಿ ಕೇಂದ್ರ ಸರ್ಕಾರದಿಂದ ಅನುದಾನ ತರಲು ನಿರಂತರವಾಗಿ ಹೋರಾಟ ನಡೆಸಿ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಅವರು ಶ್ರಮಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

4 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

5 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

7 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

10 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

11 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

17 hours ago