ಓದುಗರ ಪತ್ರ
ಅಮೆರಿಕದಿಂದ ಗಡಿಪಾರು ಮಾಡಲಾದ ಅಕ್ರಮ ವಲಸಿಗರ ೨ನೇ ತಂಡ ಅಮೃತಸರಕ್ಕೆ ಬಂದಿಳಿದಿದ್ದು, ಇವರ ಕೈ ಮತ್ತು ಕಾಲುಗಳಿಗೂ ಅಮೆರಿಕ ಕೋಳ ಹಾಕಿ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ.
ಅಮೆರಿಕ ದೇಶದ ಕಾನೂನು ಏನೇ ಇರಲಿ. ಜೀವನಕ್ಕಾಗಿ ಅಮೆರಿಕದಲ್ಲಿ ನೆಲಸಿದ ಭಾರ ತೀಯ ವಲಸಿಗರನ್ನು ಗೌರವ ಯುತವಾಗಿ ಕಳುಹಿಸದೆ ಅವ ರನ್ನು ಭಯೋತ್ಪಾದಕರಂತೆ ನಡೆಸಿಕೊಂಡಿರುವುದು ಅಮೆರಿಕದ ಘನತೆಗೆ ತಕ್ಕುದ್ದಲ್ಲ. ಅಮೆರಿಕದ ಈ ನಡೆಯನ್ನು ಯಾರೂ ಸಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಲ್ಲಿರುವಾಗಲೇ ವಲಸಿ ಗರನ್ನು ಗಡಿಪಾರು ಮಾಡಿರುವುದು ಅಕ್ಷಮ್ಯ. ಮೋದಿಯವರ ಆಪ್ತ ಮಿತ್ರರಂತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸಾರ್ಹ ವಾಗಿಯೇ ವಲಸಿಗರನ್ನು ಆಯಾ ದೇಶಕ್ಕೆ ಕಳುಹಿಸಬಹುದಿತ್ತು. ಅದರ ಬದಲು ಈ ರೀತಿ ಸರಪಳಿಯಿಂದ ಬಂಽಸಿ ಕಳುಹಿಸಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿರುವುದು ಅಮೆರಿಕದ ನಿಲುವಿಗೆ ಬದ್ಧವಾಗಿದೆಯೇನೋ ಎಂಬ ಅನುಮಾನ ಮೂಡಲು ಕಾರಣವಾಗಿದೆ. -ಎಸ್. ರಮಾನಂದ, ಜೆ. ಪಿ. ನಗರ, ಬೆಂಗಳೂರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…