ಓದುಗರ ಪತ್ರ
ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ’ ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ ಅದ್ಭುತವಾಗಿ ಪ್ರಸ್ತುತಪಡಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಪ್ರಸಾರವಾಗುತ್ತಿರುವ ಸಿನಿಮಾಗಳೆಲ್ಲವೂ 40-50 ವರ್ಷಗಳ ಹಿಂದಿನ ಸಿನಿಮಾಗಳಾಗಿದ್ದು, ಆ ಸಿನಿಮಾಗಳ ಉತ್ತಮ ಸಂದೇಶಗಳನ್ನು ಕಾರ್ಯಕ್ರಮದ ಮೂಲಕ ಸಮಾಜದ ಮುಂದಿಡಲಾಗುತ್ತಿದೆ. ಇದರಿಂದ ಯುವ ಪೀಳಿಗೆಗೆ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಿದೆ. ಆದ್ದರಿಂದ ಈ ಕಾರ್ಯಕ್ರಮ ಹೆಚ್ಚಾಗಿ ಯುವ ಸಮುದಾಯಕ್ಕೆ ತಲುಪುವಂತೆ ಮಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…