ಓದುಗರ ಪತ್ರ

ಓದುಗರ ಪತ್ರ | ಸಿನಿಮಾ-ಯಾನ ಒಂದು ಮೌಲ್ಯಯುತ ಕಾರ್ಯಕ್ರಮ

ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ’ ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ ಅದ್ಭುತವಾಗಿ ಪ್ರಸ್ತುತಪಡಿಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಪ್ರಸಾರವಾಗುತ್ತಿರುವ ಸಿನಿಮಾಗಳೆಲ್ಲವೂ 40-50 ವರ್ಷಗಳ ಹಿಂದಿನ ಸಿನಿಮಾಗಳಾಗಿದ್ದು, ಆ ಸಿನಿಮಾಗಳ ಉತ್ತಮ ಸಂದೇಶಗಳನ್ನು ಕಾರ್ಯಕ್ರಮದ ಮೂಲಕ ಸಮಾಜದ ಮುಂದಿಡಲಾಗುತ್ತಿದೆ. ಇದರಿಂದ ಯುವ ಪೀಳಿಗೆಗೆ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಿದೆ. ಆದ್ದರಿಂದ ಈ ಕಾರ್ಯಕ್ರಮ ಹೆಚ್ಚಾಗಿ ಯುವ ಸಮುದಾಯಕ್ಕೆ ತಲುಪುವಂತೆ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

3 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

3 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

3 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

3 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

3 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

3 hours ago