ಓದುಗರ ಪತ್ರ

ಓದುಗರ ಪತ್ರ| ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.

ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. ಸಾರ್ವಜನಿಕರು ಕಸ ಹಾಕಲು ಇಲ್ಲಿ ಕಸದ ಡಬ್ಬ ಇಲ್ಲ. ಜನರು ರಸ್ತೆ ಬದಿಯಲ್ಲೆ ಕಸ ಸುರಿದು ಹೋಗುತ್ತಿದ್ದು, ಗಾಳಿ ಬೀಸಿದಂತೆಲ್ಲ ಆ ಕಸ ರಸ್ತೆಗೆ ಹರಡುತ್ತಿದೆ.

ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೂ ಸ್ಥಾನವಿದೆ. ಹೀಗಿರುವಾಗ ನಗರದಲ್ಲಿ ಸ್ವಚ್ಛತೆ ಕಾಪಾಡಬೇಕಾದದ್ದು, ಮಹಾನಗರ ಪಾಲಿಕೆ ಸಿಬ್ಬಂದಿಯ ಜತೆಗೆ ಸಾರ್ವಜನಿಕರ ಕರ್ತವ್ಯವೂ ಆಗಿದೆ.

ಇಲ್ಲಿ ಕಸದ ರಾಶಿಯೇ ಸಂಗ್ರಹವಾಗುತ್ತಿರುವುದರಿಂದ ದನ- ಕರುಗಳು, ಬೀದಿ ನಾಯಿಗಳು ಹಾಗೂ ಹಂದಿಗಳು ಆಹಾರಕ್ಕಾಗಿ ಇಲ್ಲಿಯೇ ಬೀಡುಬಿಟ್ಟಿವೆ. ಕೆಲವು ಸಲ ಅವು ಏಕಾಏಕಿ ರಸ್ತೆಗೆ ಬರುತ್ತಿದ್ದು, ಅಪಘಾತಗಳಾಗುವ ಅಪಾಯವಿದೆ. ಅಲ್ಲದೆ ಇಲ್ಲಿನ ಅಶುಚಿತ್ವದಿಂದಾಗಿ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಪಾಲಿಕೆಯವರು ಇತ್ತ ಗಮನಹರಿಸಿ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ.
-ಅರುಣ್ ಕುಮಾರ್, ಹೆಬ್ಬಾಳ, ಮೈಸೂರು

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

5 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

6 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

8 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

8 hours ago