ಓದುಗರ ಪತ್ರ
ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.
ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. ಸಾರ್ವಜನಿಕರು ಕಸ ಹಾಕಲು ಇಲ್ಲಿ ಕಸದ ಡಬ್ಬ ಇಲ್ಲ. ಜನರು ರಸ್ತೆ ಬದಿಯಲ್ಲೆ ಕಸ ಸುರಿದು ಹೋಗುತ್ತಿದ್ದು, ಗಾಳಿ ಬೀಸಿದಂತೆಲ್ಲ ಆ ಕಸ ರಸ್ತೆಗೆ ಹರಡುತ್ತಿದೆ.
ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೂ ಸ್ಥಾನವಿದೆ. ಹೀಗಿರುವಾಗ ನಗರದಲ್ಲಿ ಸ್ವಚ್ಛತೆ ಕಾಪಾಡಬೇಕಾದದ್ದು, ಮಹಾನಗರ ಪಾಲಿಕೆ ಸಿಬ್ಬಂದಿಯ ಜತೆಗೆ ಸಾರ್ವಜನಿಕರ ಕರ್ತವ್ಯವೂ ಆಗಿದೆ.
ಇಲ್ಲಿ ಕಸದ ರಾಶಿಯೇ ಸಂಗ್ರಹವಾಗುತ್ತಿರುವುದರಿಂದ ದನ- ಕರುಗಳು, ಬೀದಿ ನಾಯಿಗಳು ಹಾಗೂ ಹಂದಿಗಳು ಆಹಾರಕ್ಕಾಗಿ ಇಲ್ಲಿಯೇ ಬೀಡುಬಿಟ್ಟಿವೆ. ಕೆಲವು ಸಲ ಅವು ಏಕಾಏಕಿ ರಸ್ತೆಗೆ ಬರುತ್ತಿದ್ದು, ಅಪಘಾತಗಳಾಗುವ ಅಪಾಯವಿದೆ. ಅಲ್ಲದೆ ಇಲ್ಲಿನ ಅಶುಚಿತ್ವದಿಂದಾಗಿ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಪಾಲಿಕೆಯವರು ಇತ್ತ ಗಮನಹರಿಸಿ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ.
-ಅರುಣ್ ಕುಮಾರ್, ಹೆಬ್ಬಾಳ, ಮೈಸೂರು
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…