ಓದುಗರ ಪತ್ರ

ಓದುಗರ ಪತ್ರ| ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.

ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. ಸಾರ್ವಜನಿಕರು ಕಸ ಹಾಕಲು ಇಲ್ಲಿ ಕಸದ ಡಬ್ಬ ಇಲ್ಲ. ಜನರು ರಸ್ತೆ ಬದಿಯಲ್ಲೆ ಕಸ ಸುರಿದು ಹೋಗುತ್ತಿದ್ದು, ಗಾಳಿ ಬೀಸಿದಂತೆಲ್ಲ ಆ ಕಸ ರಸ್ತೆಗೆ ಹರಡುತ್ತಿದೆ.

ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರಿಗೂ ಸ್ಥಾನವಿದೆ. ಹೀಗಿರುವಾಗ ನಗರದಲ್ಲಿ ಸ್ವಚ್ಛತೆ ಕಾಪಾಡಬೇಕಾದದ್ದು, ಮಹಾನಗರ ಪಾಲಿಕೆ ಸಿಬ್ಬಂದಿಯ ಜತೆಗೆ ಸಾರ್ವಜನಿಕರ ಕರ್ತವ್ಯವೂ ಆಗಿದೆ.

ಇಲ್ಲಿ ಕಸದ ರಾಶಿಯೇ ಸಂಗ್ರಹವಾಗುತ್ತಿರುವುದರಿಂದ ದನ- ಕರುಗಳು, ಬೀದಿ ನಾಯಿಗಳು ಹಾಗೂ ಹಂದಿಗಳು ಆಹಾರಕ್ಕಾಗಿ ಇಲ್ಲಿಯೇ ಬೀಡುಬಿಟ್ಟಿವೆ. ಕೆಲವು ಸಲ ಅವು ಏಕಾಏಕಿ ರಸ್ತೆಗೆ ಬರುತ್ತಿದ್ದು, ಅಪಘಾತಗಳಾಗುವ ಅಪಾಯವಿದೆ. ಅಲ್ಲದೆ ಇಲ್ಲಿನ ಅಶುಚಿತ್ವದಿಂದಾಗಿ ಸೊಳ್ಳೆಗಳ ಹಾವಳಿಯೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಆದ್ದರಿಂದ ಪಾಲಿಕೆಯವರು ಇತ್ತ ಗಮನಹರಿಸಿ ಕಸದ ರಾಶಿಯನ್ನು ತೆರವುಗೊಳಿಸಬೇಕಿದೆ.
-ಅರುಣ್ ಕುಮಾರ್, ಹೆಬ್ಬಾಳ, ಮೈಸೂರು

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago