೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ ಟ್ರೋಫಿಯನ್ನು ಗೆಲುವು ಮುಖಾಂತರ ಪ್ರಥಮ ಬಾರಿಗೆ ಐಪಿಎಲ್ ಪಂದ್ಯವನ್ನು ಗೆದ್ದಿತ್ತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ೧೧ ಜನ ಕ್ರೀಡಾಭಿಮಾನಿಗಳು ಮೃತಪಟ್ಟಿದ್ದರಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಗಿದ್ದು, ಕಹಿ ನೆನಪಾಗಿಯೇ ಉಳಿದಿದೆ. ಕಾಲ್ತುಳಿತಕ್ಕೆ ಬಲಿಯಾದವರ ನೆನಪಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣವನ್ನು ಮಾಡಿರುವುದು ಸ್ವಾಗತಾರ್ಹ. -ಬಿ. ಎಸ್. ಸಾಯಿ ಸಂದೇಶ್, ಮೈಸೂರು





