ಓದುಗರ ಪತ್ರ
ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು ಹಾಗೂ ಆಮದು ರಫ್ತುಗಳ ಬಗ್ಗೆ ದೂರದೃಷ್ಟಿ ಯಿಲ್ಲದಿರುವುದು ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಗೆ ಕಾರಣವಾಗಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯ ನಡುವೆ ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ.
ಚುನಾಯಿತ ಪ್ರತಿನಿಧಿಗಳು ಸಂಸತ್ ಕಲಾಪಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿ ಜನರಿಗೆ ಅನುಕೂಲವಾಗುವ ನಿರ್ಣಯಗಳನ್ನು ಕೈಗೊಳ್ಳುವ ಬದಲು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಸರ್ಕಾರದ ಆಡಳಿತ ಜನರಿಗೆ ಬೇಸರ ಮೂಡಿಸಿದ್ದು, ಸರ್ಕಾರಗಳು ತಮ್ಮ ಉಚಿತ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈಬಿಟ್ಟು, ಅಗತ್ಯ ವಸ್ತುಗಳ ಬೆಲೆ ಇಳಿಸಬೇಕಿದೆ. -ಬ್ಯಾ. ರಾ. ಪ್ರಸನ್ನ ಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…