ಓದುಗರ ಪತ್ರ

ಓದುಗರ ಪತ್ರ | ಬೆಲೆ ಏರಿಕೆ ನಿಯಂತ್ರಿಸಿ

ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.

ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು ಹಾಗೂ ಆಮದು ರಫ್ತುಗಳ ಬಗ್ಗೆ ದೂರದೃಷ್ಟಿ ಯಿಲ್ಲದಿರುವುದು ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಗೆ ಕಾರಣವಾಗಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯ ನಡುವೆ ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ.

ಚುನಾಯಿತ ಪ್ರತಿನಿಧಿಗಳು ಸಂಸತ್ ಕಲಾಪಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿ ಜನರಿಗೆ ಅನುಕೂಲವಾಗುವ ನಿರ್ಣಯಗಳನ್ನು ಕೈಗೊಳ್ಳುವ ಬದಲು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಸರ್ಕಾರದ ಆಡಳಿತ ಜನರಿಗೆ ಬೇಸರ ಮೂಡಿಸಿದ್ದು, ಸರ್ಕಾರಗಳು ತಮ್ಮ ಉಚಿತ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈಬಿಟ್ಟು, ಅಗತ್ಯ ವಸ್ತುಗಳ ಬೆಲೆ ಇಳಿಸಬೇಕಿದೆ. -ಬ್ಯಾ. ರಾ. ಪ್ರಸನ್ನ ಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago