ಓದುಗರ ಪತ್ರ
ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು ಹಾಗೂ ಆಮದು ರಫ್ತುಗಳ ಬಗ್ಗೆ ದೂರದೃಷ್ಟಿ ಯಿಲ್ಲದಿರುವುದು ಕಳೆದ ಒಂದು ವರ್ಷದಿಂದ ಬೆಲೆ ಏರಿಕೆಗೆ ಕಾರಣವಾಗಿದೆ. ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯ ನಡುವೆ ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ.
ಚುನಾಯಿತ ಪ್ರತಿನಿಧಿಗಳು ಸಂಸತ್ ಕಲಾಪಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿ ಜನರಿಗೆ ಅನುಕೂಲವಾಗುವ ನಿರ್ಣಯಗಳನ್ನು ಕೈಗೊಳ್ಳುವ ಬದಲು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಸರ್ಕಾರದ ಆಡಳಿತ ಜನರಿಗೆ ಬೇಸರ ಮೂಡಿಸಿದ್ದು, ಸರ್ಕಾರಗಳು ತಮ್ಮ ಉಚಿತ ಯೋಜನೆಗಳಿಗೆ ಹಣ ಹೊಂದಿಸುವ ಸಲುವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈಬಿಟ್ಟು, ಅಗತ್ಯ ವಸ್ತುಗಳ ಬೆಲೆ ಇಳಿಸಬೇಕಿದೆ. -ಬ್ಯಾ. ರಾ. ಪ್ರಸನ್ನ ಕುಮಾರ್, ಬ್ಯಾಡರಹಳ್ಳಿ, ಕೆ. ಆರ್. ನಗರ ತಾ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…