ಓದುಗರ ಪತ್ರ
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ.
ಇನ್ನು ವಾಯುವಿಹಾರಿಗಳಿಗೂ ಇದರಿಂದ ಬಹಳ ತೊಂದರೆಯಾಗುತ್ತಿದೆ. ಮನೆಗಳ ಮುಂಭಾಗ ನಿಲ್ಲಿಸಿರುವ ದ್ವಿಚಕ್ರವಾಹನಗಳ ಸೀಟ್ಗಳನ್ನು ಕಚ್ಚಿಹಾಕಿರುವ ಪ್ರಕರಣಗಳು ಇವೆ.
ಪ್ರಸ್ತುತ ಪರೀಕ್ಷೆಗಳು ಮುಗಿದು ರಜೆ ಬಂದಿರುವುದರಿಂದ ಮಕ್ಕಳು ಬೀದಿಯಲ್ಲಿ ಆಟವಾಡುತ್ತಿರುತ್ತಾರೆ. ಈ ಸಮಯದಲ್ಲಿ ಬೀದಿ ನಾಯಿಗಳಿಂದ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿವೆ. ಒಟ್ಟಾರೆ ನಾಯಿಗಳ ಹಾವಳಿಯಿಂದಾಗಿ ನಿವಾಸಿಗಳು ನಿರ್ಭೀತಿಯಿಂದ ಬೀದಿಯಲ್ಲಿ ಸಂಚರಿಸಲು ತೊಂದರೆಯಾಗುತ್ತಿದೆ. ಆದ ಕಾರಣ ಸಂಬಂಧಪಟ್ಟ ನಗರಪಾಲಿಕೆ ಅಧಿಕಾರಿಗಳು ಇತ್ತ ಗಮನಹರಿಸಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಾಗಿದೆ.
– ಕೆ.ಎನ್.ಅಶ್ವತ್ಥನಾರಾಯಣ, ಜೆ.ಪಿ.ನಗರ, ಮೈಸೂರು
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…