ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ.
ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ ‘ಗುಂಡ್ಲಪೇಟ್’ ಎಂತಲೂ ಚಾಮರಾಜನಗರ
ಎಂಬುದರ ಬದಲಾಗಿ “ಚಾಮಾರಾಜ ನಗರ’ ಎಂತಲೂ ತಪ್ಪಾಗಿ ಬರೆಯಲಾಗಿದೆ. ನಾಮಫಲಕ ಬರೆಯುವವರಿಗೆ ಸರಿಯಾಗಿ ಗೊತ್ತಿಲ್ಲ ಎಂದಾದರೆ ಸರಿಯಾಗಿ ತಿಳಿದುಕೊಂಡಿರುವವರಾದರೂ ಹೇಳಿ ಫಲಕದಲ್ಲಿ ಸರಿಯಾಗಿ ಬರೆಸಿ ಅಳವಡಿಸಬಹುದಿತ್ತಲ್ಲವೇ? ಹೆದ್ದಾರಿಯ ಫಲಕಗಳಲ್ಲಿಯೂ ಇಂತಹ ಲೋಪದೋಷಗಳು ಸಾಮಾನ್ಯವಾಗಿ ಹೋಗಿವೆ. ಇಂತಹ ಫಲಕಗಳನ್ನು ನೋಡನೋಡುತ್ತಲೇ ಓಡಾಡುವ ನಮಗೆ ಏನೂ ಅನ್ನಿಸುವುದೇ ಇಲ್ಲ. ಏಕೆಂದರೆ ನವೆಂಬರ್ಗೆ ಇನ್ನೂ ಮೂರ್ನಾಲ್ಕು ತಿಂಗಳಿದೆಯಲ್ಲ.
-ಮ.ಗು.ಬಸವಣ್ಣ, ಜೆಎಸ್ ಎಸ್ ಬಡಾವಣೆ, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…