ದೇಶದ ವಿವಿಧ ನ್ಯಾಯಾಲಯಗಳಲ್ಲಿ ಸಿವಿಲ್ ನ್ಯಾಯಾಧೀಶರಾಗಿ ನೇಮಕ ಹೊಂದಲು ಅಭ್ಯರ್ಥಿಗಳು ವಕೀಲರಾಗಿ ಕಡೆಯ ಪಕ್ಷ ಮೂರು ವರ್ಷಗಳ ಕಾಲ ಕೆಲಸ ಮಾಡಬೇಕೆಂಬ ನಿಯಮವನ್ನು ಪುನಃ ಜಾರಿಗೆ ತರಲು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪು ಸ್ವಾಗತಾರ್ಹವಾಗಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಸದೃಢಗೊಳಿಸುವ ಪ್ರಯತ್ನವಾಗಿದೆ.
ಮೂರು ವರ್ಷಗಳ ಕಾಲ ವಕೀಲರಾಗಿ ಕೆಲಸ ಮಾಡಿರಬೇಕೆಂಬ ನಿಯಮ 2002 ರವರೆಗೂ ಜಾರಿಯಲ್ಲಿತ್ತಾದರೂ ನಂತರ ಆ ನಿಯಮವನ್ನು ತೆಗೆದು ಹಾಕಲಾಯಿತು. ನ್ಯಾಯಾಧೀಶರ ಹುದ್ದೆ ಉನ್ನತ ಹಾಗೂ ಪವಿತ್ರವಾದ ಹುದ್ದೆಯಾಗಿದ್ದು, ಇಂತಹ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು ನ್ಯಾಯಾಲಯದ ರೀತಿ ರಿವಾಜುಗಳ ಜೊತೆಗೆ ನ್ಯಾಯಾಲಯದ ನಿಯಮಗಳು, ಕಾನೂನಿನ ತಿಳಿವಳಿಕೆ ಹಾಗೂ ವಿಶೇಷವಾಗಿ ಕಾನೂನುಗಳನ್ನು ಅನ್ವಯಗೊಳಿಸುವ ಬಗ್ಗೆ ಹೆಚ್ಚಿನ ಪರಿಜ್ಞಾನ ಹೊಂದಿರಬೇಕು. ಪುಸ್ತಕಗಳಲ್ಲಿ ಅಥವಾ ಗ್ರಂಥಗಳಲ್ಲಿ ಏನೇ ಓದಿಕೊಂಡಿದ್ದರೂ , ವಕೀಲರಾಗಿ ನ್ಯಾಯಾಲಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳದ ಹೊರತು, ಅವರಿಗೆ ನ್ಯಾಯಾಂಗದ ಒಳ ಹೊರಗುಗಳ ಬಗ್ಗೆ ಹೆಚ್ಚಿನ ತಿಳಿವಳಿಕೆ ಲಭ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯದ ಶೀರ್ವ ಗಮನಾರ್ಹವಾಗಿದೆ.
-ಕೆ.ವಿ ವಾಸು, ವಿವೇಕಾನಂದ ನಗರ, ಮೈಸೂರು
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…