ಓದುಗರ ಪತ್ರ
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು ನಗರದ ಹಲವೆಡೆ ಮನೆ ಮುಂದೆ ನಲ್ಲಿಗೆ ಪೈಪ್ ಜೋಡಿಸಿ, ವಾಹನ, ಪಾತ್ರೆ ತೊಳೆಯುತ್ತಾ ನೀರು ವ್ಯರ್ಥಮಾಡುತ್ತಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ ನೀರಿನ ಶುಲ್ಕ ಕಟ್ಟುವವರು ನಾವು, ನಿಮಗೇನು ತೊಂದರೆ ಎಂದು ಜಗಳಕ್ಕೆ ಬರುತ್ತಾರೆ. ನಗರದ ಬಹುತೇಕ ಕಡೆ ಸಾರ್ವಜನಿಕ ನಲ್ಲಿಗಳು ಹಾಳಾಗಿದ್ದು, ನಿರಂತರವಾಗಿ ನೀರು ಸೋರುತ್ತಿದ್ದರೂ ಸಂಬಂಧಪಟ್ಟವರು ದುರಸ್ತಿಗೆ ಕ್ರಮ ಕೈಗೊಳ್ಳುವುದಿಲ್ಲ.
ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರತಿ ವಾರ್ಡ್ ನೀಡಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು ಹಾಗೂ ಮಿತವಾಗಿ ನೀರು ಬಳಸುವುದರ ಬಗ್ಗೆ ಅರಿವು ಮೂಡಿಸಬೇಕು. ನೀರು ಪೋಲು ಮಾಡುವವರಿಗೆ ದಂಡ ವಿಧಿಸುವುದರ ಜೊತೆಗೆ, ಸ್ಥಳೀಯ ನಿವಾಸಿಗಳನ್ನೊಳಗೊಂಡ ‘ಜಲರಕ್ಷಕ’ ಎಂಬ ಸ್ವಯಂಸೇವಕರ ತಂಡವನ್ನು ರಚಿಸಿ ಸೋರಿಕೆಗಳ ಮೇಲೆ ನಿಗಾವಹಿಸಬೇಕು.
– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…