ಓದುಗರ ಪತ್ರ
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು ನಗರದ ಹಲವೆಡೆ ಮನೆ ಮುಂದೆ ನಲ್ಲಿಗೆ ಪೈಪ್ ಜೋಡಿಸಿ, ವಾಹನ, ಪಾತ್ರೆ ತೊಳೆಯುತ್ತಾ ನೀರು ವ್ಯರ್ಥಮಾಡುತ್ತಾರೆ. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದರೆ ನೀರಿನ ಶುಲ್ಕ ಕಟ್ಟುವವರು ನಾವು, ನಿಮಗೇನು ತೊಂದರೆ ಎಂದು ಜಗಳಕ್ಕೆ ಬರುತ್ತಾರೆ. ನಗರದ ಬಹುತೇಕ ಕಡೆ ಸಾರ್ವಜನಿಕ ನಲ್ಲಿಗಳು ಹಾಳಾಗಿದ್ದು, ನಿರಂತರವಾಗಿ ನೀರು ಸೋರುತ್ತಿದ್ದರೂ ಸಂಬಂಧಪಟ್ಟವರು ದುರಸ್ತಿಗೆ ಕ್ರಮ ಕೈಗೊಳ್ಳುವುದಿಲ್ಲ.
ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರತಿ ವಾರ್ಡ್ ನೀಡಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು ಹಾಗೂ ಮಿತವಾಗಿ ನೀರು ಬಳಸುವುದರ ಬಗ್ಗೆ ಅರಿವು ಮೂಡಿಸಬೇಕು. ನೀರು ಪೋಲು ಮಾಡುವವರಿಗೆ ದಂಡ ವಿಧಿಸುವುದರ ಜೊತೆಗೆ, ಸ್ಥಳೀಯ ನಿವಾಸಿಗಳನ್ನೊಳಗೊಂಡ ‘ಜಲರಕ್ಷಕ’ ಎಂಬ ಸ್ವಯಂಸೇವಕರ ತಂಡವನ್ನು ರಚಿಸಿ ಸೋರಿಕೆಗಳ ಮೇಲೆ ನಿಗಾವಹಿಸಬೇಕು.
– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…