ಓದುಗರ ಪತ್ರ

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ.

ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಅರಮನೆಯಲ್ಲಿ ಪ್ರವಾಸಿಗರಿಗೆ ನೀಡುವ ಟಿಕೆಟ್ ಗಳಲ್ಲಿ ಯಾವುದೇ ಬಾರ್‌ಕೋಡ್ ಆಗಲಿ ಅಥವಾ ಟಿಕೆಟ್ ನಂಬ‌ಗಳಾಗಲಿ ಇರುವುದಿಲ್ಲ. ಹೀಗಾಗಿ ಅನಧಿಕೃತವಾಗಿ ಟಿಕೆಟ್‌ಗಳು ಮಾರಾಟವಾಗುತ್ತಿವೆ ಎಂಬುದು ಪ್ರವಾಸಿಗರ ದೂರಾಗಿದೆ. ಹೀಗೆ ಪ್ರತಿಯೊಂದರಲ್ಲಿಯೂ ಅಕ್ರಮಗಳು ನಡೆಯುತ್ತಿರುವುದು ಬೆಳಕಿಗ ಬಂದಿದ್ದು, ಸರ್ಕಾರಕ್ಕೆ ಸೇರಬೇಕಾದ ಲಕ್ಷಾಂತರ ರೂ. ಭ್ರಷ್ಟರ ಪಾಲಾಗುತ್ತಿದೆ.

2014ರಲ್ಲಿಯೂ ಇಂತಹದ್ದೇ ಒಂದು ಆರೋಪ ಕೇಳಿ ಬಂದಿತ್ತು, ಅರಮನಯ ದರ್ಬಾರ್ ಸಭಾಂಗಣಕ್ಕೆ ಚಿನ್ನದ ಲೇಪನ ಅಳವಡಿಸುವವಲ್ಲಿಯೂ ಕಳಪೆ ಕಾಮಗಾರಿ ನಡೆದಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಂದ ಸುಮಾರು 8 ಅಧಿಕಾರಿಗಳ ವಿರುದ್ಧ ತನಿಖೆಯನ್ನೂ ನಡೆಸಲಾಗಿತ್ತು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಯೇ ಭ್ರಷ್ಟಾಚಾರ ನಡೆದರೆ, ಅದು ರಾಜ್ಯಕ್ಕೆ ಕಳಂಕ ತರಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಎಚ್ಚರ ವಹಿಸಿ ಅರಮನೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕಿದೆ.
-ಮುಳ್ಳೂರು ಪ್ರಕಾಶ್‌, ಕನಕದಾಸ ನಗರ, ಮೈಸೂರು,

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

2 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

3 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

3 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

4 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

4 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

4 hours ago