ಓದುಗರ ಪತ್ರ

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ.

ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಅರಮನೆಯಲ್ಲಿ ಪ್ರವಾಸಿಗರಿಗೆ ನೀಡುವ ಟಿಕೆಟ್ ಗಳಲ್ಲಿ ಯಾವುದೇ ಬಾರ್‌ಕೋಡ್ ಆಗಲಿ ಅಥವಾ ಟಿಕೆಟ್ ನಂಬ‌ಗಳಾಗಲಿ ಇರುವುದಿಲ್ಲ. ಹೀಗಾಗಿ ಅನಧಿಕೃತವಾಗಿ ಟಿಕೆಟ್‌ಗಳು ಮಾರಾಟವಾಗುತ್ತಿವೆ ಎಂಬುದು ಪ್ರವಾಸಿಗರ ದೂರಾಗಿದೆ. ಹೀಗೆ ಪ್ರತಿಯೊಂದರಲ್ಲಿಯೂ ಅಕ್ರಮಗಳು ನಡೆಯುತ್ತಿರುವುದು ಬೆಳಕಿಗ ಬಂದಿದ್ದು, ಸರ್ಕಾರಕ್ಕೆ ಸೇರಬೇಕಾದ ಲಕ್ಷಾಂತರ ರೂ. ಭ್ರಷ್ಟರ ಪಾಲಾಗುತ್ತಿದೆ.

2014ರಲ್ಲಿಯೂ ಇಂತಹದ್ದೇ ಒಂದು ಆರೋಪ ಕೇಳಿ ಬಂದಿತ್ತು, ಅರಮನಯ ದರ್ಬಾರ್ ಸಭಾಂಗಣಕ್ಕೆ ಚಿನ್ನದ ಲೇಪನ ಅಳವಡಿಸುವವಲ್ಲಿಯೂ ಕಳಪೆ ಕಾಮಗಾರಿ ನಡೆದಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಂದ ಸುಮಾರು 8 ಅಧಿಕಾರಿಗಳ ವಿರುದ್ಧ ತನಿಖೆಯನ್ನೂ ನಡೆಸಲಾಗಿತ್ತು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಯೇ ಭ್ರಷ್ಟಾಚಾರ ನಡೆದರೆ, ಅದು ರಾಜ್ಯಕ್ಕೆ ಕಳಂಕ ತರಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಎಚ್ಚರ ವಹಿಸಿ ಅರಮನೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕಿದೆ.
-ಮುಳ್ಳೂರು ಪ್ರಕಾಶ್‌, ಕನಕದಾಸ ನಗರ, ಮೈಸೂರು,

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…

2 hours ago

ಕೈಬೀಸಿ ಕರೆಯುತ್ತಿದೆ ಕುರಹಟ್ಟಿ ವಾಟರ್‌ಫಾಲ್ಸ್‌

ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್‌ಕುಮಾರ್‌ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…

2 hours ago

ಓದುಗರ ಪತ್ರ | ಬಿಸಿಲ ಬೇಗೆ ಮತ್ತು ನಕಲಿ ಮಾವಿನ ರಸದ ಹಾವಳಿ

ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…

3 hours ago

ಓದುಗರ ಪತ್ರ | ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…

3 hours ago

ಓದುಗರ ಪತ್ರ | ಅವೈಜ್ಞಾನಿಕ ಆಸ್ತಿ ತೆರಿಗೆ ಪದ್ಧತಿ ಕೊನೆಗೊಳ್ಳಲಿ

ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

4 hours ago