ಓದುಗರ ಪತ್ರ

ಓದುಗರ ಪತ್ರ: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ.

ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರವಾಸಿಗರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಅರಮನೆಯಲ್ಲಿ ಪ್ರವಾಸಿಗರಿಗೆ ನೀಡುವ ಟಿಕೆಟ್ ಗಳಲ್ಲಿ ಯಾವುದೇ ಬಾರ್‌ಕೋಡ್ ಆಗಲಿ ಅಥವಾ ಟಿಕೆಟ್ ನಂಬ‌ಗಳಾಗಲಿ ಇರುವುದಿಲ್ಲ. ಹೀಗಾಗಿ ಅನಧಿಕೃತವಾಗಿ ಟಿಕೆಟ್‌ಗಳು ಮಾರಾಟವಾಗುತ್ತಿವೆ ಎಂಬುದು ಪ್ರವಾಸಿಗರ ದೂರಾಗಿದೆ. ಹೀಗೆ ಪ್ರತಿಯೊಂದರಲ್ಲಿಯೂ ಅಕ್ರಮಗಳು ನಡೆಯುತ್ತಿರುವುದು ಬೆಳಕಿಗ ಬಂದಿದ್ದು, ಸರ್ಕಾರಕ್ಕೆ ಸೇರಬೇಕಾದ ಲಕ್ಷಾಂತರ ರೂ. ಭ್ರಷ್ಟರ ಪಾಲಾಗುತ್ತಿದೆ.

2014ರಲ್ಲಿಯೂ ಇಂತಹದ್ದೇ ಒಂದು ಆರೋಪ ಕೇಳಿ ಬಂದಿತ್ತು, ಅರಮನಯ ದರ್ಬಾರ್ ಸಭಾಂಗಣಕ್ಕೆ ಚಿನ್ನದ ಲೇಪನ ಅಳವಡಿಸುವವಲ್ಲಿಯೂ ಕಳಪೆ ಕಾಮಗಾರಿ ನಡೆದಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಂದ ಸುಮಾರು 8 ಅಧಿಕಾರಿಗಳ ವಿರುದ್ಧ ತನಿಖೆಯನ್ನೂ ನಡೆಸಲಾಗಿತ್ತು. ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿಯೇ ಭ್ರಷ್ಟಾಚಾರ ನಡೆದರೆ, ಅದು ರಾಜ್ಯಕ್ಕೆ ಕಳಂಕ ತರಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಎಚ್ಚರ ವಹಿಸಿ ಅರಮನೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕಿದೆ.
-ಮುಳ್ಳೂರು ಪ್ರಕಾಶ್‌, ಕನಕದಾಸ ನಗರ, ಮೈಸೂರು,

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

34 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago