ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್ನ ಮನೆಗಳ ಮುಂದೆ ನಿಲ್ಲಿಸುವ ಬೈಕ್ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ ಕಳ್ಳರು ಪೆಟ್ರೋಲ್ ಕದಿಯುತ್ತಿದ್ದಾರೆ. ಇತ್ತೀಚೆಗೆ ಈ ಬಡಾವಣೆಗಳಲ್ಲಿ ಪೊಲೀಸ್ ಗಸ್ತು ತಿರುಗುವುದು ಕಡಿಮೆಯಾಗಿದ್ದು, ಕಳ್ಳರ ಹಾವಳಿ ಹೆಚ್ಚಾಗಲು ಕಾರಣವಾಗಿದೆ. ಕಳ್ಳರು ಯಾವುದೇ ಅಂಜಿಕೆ ಇಲ್ಲದೆ ಪೆಟ್ರೋಲ್ ಕದ್ದು ಪರಾರಿಯಾಗುತ್ತಿದ್ದಾರೆ.
ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮುಂದಿನ ದಿನಗಳಲ್ಲಿ ಮನೆಗಳ್ಳತನ ಅಥವಾ ಸರಗಳತಗಳಾಗಬಹುದು ಎಂಬ ಆತಂಕ ಶುರುವಾಗಿದೆ. ಆದ್ದರಿಂದ ಸಂಬಂಧಪಟ್ಟ ಪೊಲೀಸ್ ಠಾಣೆಯವರು ಈ ಭಾಗದಲ್ಲಿ ಗಸ್ತು ತಿರುಗುವ ಮೂಲಕ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಬೇಕಿದೆ.
– ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…