ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರಾತ್ರಿಯಾದರೆ ಸಾಕು ಗುಂಪಾಗಿ ಊಳಿಡುವ ಸದ್ದು ಜನರಿಗೆ ಕಿರಿಕಿರಿಯುಂಟುಮಾಡುತ್ತಿದೆ. ಇಲ್ಲಿ ಮಾಂಸ ದಂಗಡಿಗಳವರು ಮಾಂಸದ ತ್ಯಾಜ್ಯ ವಿಲೇವಾರಿ ಯನ್ನು ಸಮರ್ಪಕವಾಗಿ ಮಾಡದ ಪರಿಣಾಮ ಅವು ಮಾಂಸಕ್ಕಾಗಿ ರಸ್ತೆಯಲ್ಲಿಯೇ ಡುತ್ತಿರುತ್ತವೆ. ಇನ್ನು ಮಕ್ಕಳು ಶಾಲೆಗೆ ಹೋಗುವ ಹಾಗೂ ಶಾಲೆಯಿಂದ ಬರುವ ವೇಳೆ ಅವು ಮಕ್ಕಳ ಮೇಲೆ ಮೇಲೆ ದಾಳಿ ಮಾಡಿದರೆ ಯಾರು ಹೊಣೆ? ನಾಯಿಗಳು ಹಿಂಡು ಹಿಂಡಾಗಿ ಓಡಾಡುವುದರಿಂದ ಮಹಿಳೆಯರು ಮತ್ತು ಹಿರಿಯ ನಾಗರಿಕರು ಒಂಟಿಯಾಗಿ ರಸ್ತೆಗೆ ಬರಲು ಆತಂಕಪಡುವಂತಾಗಿದೆ. ಆದ್ದರಿಂದ ಗ್ರಾಮ ಪಂಚಾಯಿತಿಯವರು ಈ ಬಗ್ಗೆ ಕ್ರಮವಹಿಸಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…