ಓದುಗರ ಪತ್ರ
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರಾತ್ರಿಯಾದರೆ ಸಾಕು ಗುಂಪಾಗಿ ಊಳಿಡುವ ಸದ್ದು ಜನರಿಗೆ ಕಿರಿಕಿರಿಯುಂಟುಮಾಡುತ್ತಿದೆ. ಇಲ್ಲಿ ಮಾಂಸ ದಂಗಡಿಗಳವರು ಮಾಂಸದ ತ್ಯಾಜ್ಯ ವಿಲೇವಾರಿ ಯನ್ನು ಸಮರ್ಪಕವಾಗಿ ಮಾಡದ ಪರಿಣಾಮ ಅವು ಮಾಂಸಕ್ಕಾಗಿ ರಸ್ತೆಯಲ್ಲಿಯೇ ಡುತ್ತಿರುತ್ತವೆ. ಇನ್ನು ಮಕ್ಕಳು ಶಾಲೆಗೆ ಹೋಗುವ ಹಾಗೂ ಶಾಲೆಯಿಂದ ಬರುವ ವೇಳೆ ಅವು ಮಕ್ಕಳ ಮೇಲೆ ಮೇಲೆ ದಾಳಿ ಮಾಡಿದರೆ ಯಾರು ಹೊಣೆ? ನಾಯಿಗಳು ಹಿಂಡು ಹಿಂಡಾಗಿ ಓಡಾಡುವುದರಿಂದ ಮಹಿಳೆಯರು ಮತ್ತು ಹಿರಿಯ ನಾಗರಿಕರು ಒಂಟಿಯಾಗಿ ರಸ್ತೆಗೆ ಬರಲು ಆತಂಕಪಡುವಂತಾಗಿದೆ. ಆದ್ದರಿಂದ ಗ್ರಾಮ ಪಂಚಾಯಿತಿಯವರು ಈ ಬಗ್ಗೆ ಕ್ರಮವಹಿಸಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…