ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಅಂತರಸಂತೆ ಗ್ರಾಮದ ಸರ್ಕಾರಿ ಶಾಲಾ-ಕಾಲೇಜು ಆವರಣದಲ್ಲಿ ಸಂಜೆಯಾಗುತ್ತಲೇ ಮದ್ಯದ ಕೂಟಗಳು ಆರಂಭವಾಗುತ್ತವೆ. ಕೆಲ ಮದ್ಯವ್ಯಸನಿಗಳು ಕಾಲೇಜಿನ ಕಾರಿಡಾರಿನಲ್ಲಿಯೇ ಕುಳಿತು ಮದ್ಯಪಾನ ಮಾಡುತ್ತಿದ್ದು, ಬಳಿಕ ಬಾಟಲಿ, ಪ್ಲಾಸ್ಟಿಕ್ ಕವರ್ ಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಕಾಲೇಜು ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಎಂದು ಸಾಕಷ್ಟು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಮುಂದಾದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಶಾಲಾ-ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ. -ಕಾರ್ತಿಕ್, ಎಚ್. ಡಿ. ಕೋಟೆ ತಾ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…