ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ ಮಾಡುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಬೇಕಿದೆ.
ಡಿ. ೩೧ರ ರಾತ್ರಿ ಬಹುತೇಕ ಮಂದಿ ಹೊಸ ವರ್ಷದ ಆಚರಣೆಗಳನ್ನು ಕಬಿನಿ, ತಾರಕ, ಕೆಆರ್ಎಸ್ ಹಿನ್ನೀರುಗಳಲ್ಲಿ ಮಾಡುತ್ತಿದ್ದು, ಮದ್ಯದ ಕೂಟಗಳನ್ನು ಆಯೋಜಿಸಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಈ ವೇಳೆ ಮದ್ಯಪಾನ ಮಾಡುವ ಜತೆಗೆ ಅಲ್ಲಿಯೇ ಅಡುಗೆ ಮಾಡಿ ಊಟ ಮಾಡುತ್ತಾರೆ. ಪಾರ್ಟಿ ಮಾಡುವುದರಿಂದ ಏನೂ ಸಮಸ್ಯೆ ಇಲ್ಲ. ಆದರೆ ಪಾರ್ಟಿ ಮುಗಿದ ಬಳಿಕ ಉಳಿದ ಆಹಾರ ಪದಾರ್ಥಗಳು, ಅದರ ಪ್ಲಾಸ್ಟಿಕ್ ಕವರ್ಗಳು ಹಾಗೂ ಬಾಟಲಿಗಳಂಥ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದು, ಇದರಿಂದಾಗಿ ಹಿನ್ನೀರಿನಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಕೆಲವರು ಕುಡಿದ ಮತ್ತಿನಲ್ಲಿ ಗಲಾಟೆಗಳನ್ನು ಮಾಡಿಕೊಂಡು ಅನಾಹುತ ಸಂಭವಿಸುವ ಅಪಾಯವೂ ಇದೆ. ಆದ್ದರಿಂದ ಪೊಲೀಸ್ ಇಲಾಖೆಯು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ, ಹಿನ್ನೀರಿನ ಪ್ರದೇಶಗಳಲ್ಲಿ ಹೊಸ ವರ್ಷದ ನೆಪದಲ್ಲಿ ನಡೆಯುವ ಮೋಜಿನ ಕೂಟಗಳಿಗೆ ಕಡಿವಾಣ ಹಾಕಬೇಕಿದೆ. -ಸಂಜಯ್, ಶ್ರೀರಾಂಪುರ, ಮೈಸೂರು.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…