ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ ಮಾಡುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಬೇಕಿದೆ.
ಡಿ. ೩೧ರ ರಾತ್ರಿ ಬಹುತೇಕ ಮಂದಿ ಹೊಸ ವರ್ಷದ ಆಚರಣೆಗಳನ್ನು ಕಬಿನಿ, ತಾರಕ, ಕೆಆರ್ಎಸ್ ಹಿನ್ನೀರುಗಳಲ್ಲಿ ಮಾಡುತ್ತಿದ್ದು, ಮದ್ಯದ ಕೂಟಗಳನ್ನು ಆಯೋಜಿಸಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಈ ವೇಳೆ ಮದ್ಯಪಾನ ಮಾಡುವ ಜತೆಗೆ ಅಲ್ಲಿಯೇ ಅಡುಗೆ ಮಾಡಿ ಊಟ ಮಾಡುತ್ತಾರೆ. ಪಾರ್ಟಿ ಮಾಡುವುದರಿಂದ ಏನೂ ಸಮಸ್ಯೆ ಇಲ್ಲ. ಆದರೆ ಪಾರ್ಟಿ ಮುಗಿದ ಬಳಿಕ ಉಳಿದ ಆಹಾರ ಪದಾರ್ಥಗಳು, ಅದರ ಪ್ಲಾಸ್ಟಿಕ್ ಕವರ್ಗಳು ಹಾಗೂ ಬಾಟಲಿಗಳಂಥ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದು, ಇದರಿಂದಾಗಿ ಹಿನ್ನೀರಿನಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಕೆಲವರು ಕುಡಿದ ಮತ್ತಿನಲ್ಲಿ ಗಲಾಟೆಗಳನ್ನು ಮಾಡಿಕೊಂಡು ಅನಾಹುತ ಸಂಭವಿಸುವ ಅಪಾಯವೂ ಇದೆ. ಆದ್ದರಿಂದ ಪೊಲೀಸ್ ಇಲಾಖೆಯು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ, ಹಿನ್ನೀರಿನ ಪ್ರದೇಶಗಳಲ್ಲಿ ಹೊಸ ವರ್ಷದ ನೆಪದಲ್ಲಿ ನಡೆಯುವ ಮೋಜಿನ ಕೂಟಗಳಿಗೆ ಕಡಿವಾಣ ಹಾಕಬೇಕಿದೆ. -ಸಂಜಯ್, ಶ್ರೀರಾಂಪುರ, ಮೈಸೂರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…