ಓದುಗರ ಪತ್ರ

ಓದುಗರ ಪತ್ರ | ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಕೆಎಸ್‌ಆರ್‌ಟಿಸಿ ಬಸ್‌ಗಳೂ ಡಿಪೋಗೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುವ ಅಪಾಯವಿದೆ. ಅಲ್ಲದೆ ರಾತ್ರಿ ವೇಳೆ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಸದ್ಯ ಈ ರಸ್ತೆಯಲ್ಲಿ ಸಂಚರಿ ಸುವ ಸವಾರರು ಹೈರಾಣಾಗಿದ್ದು, ಮುಖ್ಯ ರಸ್ತೆಯ ಸ್ಥಿತಿಯೇ ಹೀಗಾದರೆ ಬೇರೆ ರಸ್ತೆಗಳ ಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈ ಬಗ್ಗೆ ಅಽಕಾರಿ ಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಽಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

2 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

4 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

4 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

4 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

5 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

6 hours ago