ಓದುಗರ ಪತ್ರ

ಓದುಗರ ಪತ್ರ | ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಕೆಎಸ್‌ಆರ್‌ಟಿಸಿ ಬಸ್‌ಗಳೂ ಡಿಪೋಗೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುವ ಅಪಾಯವಿದೆ. ಅಲ್ಲದೆ ರಾತ್ರಿ ವೇಳೆ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಸದ್ಯ ಈ ರಸ್ತೆಯಲ್ಲಿ ಸಂಚರಿ ಸುವ ಸವಾರರು ಹೈರಾಣಾಗಿದ್ದು, ಮುಖ್ಯ ರಸ್ತೆಯ ಸ್ಥಿತಿಯೇ ಹೀಗಾದರೆ ಬೇರೆ ರಸ್ತೆಗಳ ಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈ ಬಗ್ಗೆ ಅಽಕಾರಿ ಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಽಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

1 hour ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

2 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

4 hours ago