ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್ನಿಂದ ಕೆಎಸ್ಆರ್ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಕೆಎಸ್ಆರ್ಟಿಸಿ ಬಸ್ಗಳೂ ಡಿಪೋಗೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುವ ಅಪಾಯವಿದೆ. ಅಲ್ಲದೆ ರಾತ್ರಿ ವೇಳೆ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಸದ್ಯ ಈ ರಸ್ತೆಯಲ್ಲಿ ಸಂಚರಿ ಸುವ ಸವಾರರು ಹೈರಾಣಾಗಿದ್ದು, ಮುಖ್ಯ ರಸ್ತೆಯ ಸ್ಥಿತಿಯೇ ಹೀಗಾದರೆ ಬೇರೆ ರಸ್ತೆಗಳ ಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈ ಬಗ್ಗೆ ಅಽಕಾರಿ ಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಽಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…