ಓದುಗರ ಪತ್ರ

ಓದುಗರ ಪತ್ರ| ಮೌಲ್ಯ ಕಳೆದುಕೊಳ್ಳುತ್ತಿರುವ ಮಾಧ್ಯಮಗಳು

ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ.

ಇತ್ತೀಚೆಗೆ ಸುದ್ದಿ ವಾಹಿನಿಗಳ ಸಂಖ್ಯೆ ಹೆಚ್ಚಾಗಿದ್ದು, ಆನ್‌ಲೈನ್ ಮಾಧ್ಯಮಗಳು, ಯೂಟ್ಯೂಬ್ ಚಾನೆಲ್‌ಗಳು ಬಂದ ಮೇಲಂತೂ ಮಾಧ್ಯಮಗಳು ಮೌಲ್ಯಯುತ ಸುದ್ದಿ ಬಿತ್ತರಿಸುವು ದನ್ನೇ ಮರೆತುಬಿಟ್ಟಿವೆ ಎನ್ನಬಹುದು.
ನಟದರ್ಶನ್ ಪ್ರಕರಣವನ್ನೇ ತೆಗೆದುಕೊಳ್ಳೋಣ. ಆ ಪ್ರಕರಣ ತನಿಖೆ ಹಂತದಲ್ಲಿದ್ದು, ತನಿಖೆಯ
ವಿಚಾರಗಳನ್ನು ಪೊಲೀಸರು ಈವರೆಗೂ ಬಹಿರಂಗಪಡಿಸಿಲ್ಲ. ಅಲ್ಲದೇ ಜೈಲಿನಲ್ಲಿಯೂ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ವಿಚಾರವೂ ಯಾರಿಗೂ ಗೊತ್ತಿಲ್ಲ. ಆದರೆ ಮಾಧ್ಯಮಗಳು ಮಾತ್ರ ಈ ಬಗ್ಗೆ ಕಲ್ಪಿತ ವರದಿಗಳನ್ನು ಪ್ರಕಟಿಸುತ್ತಾ ಜನರಲ್ಲಿ ಗೊಂದಲ ಸೃಷ್ಟಿಸಿವೆ. ಕೆಲ ವರದಿಗಾರರು ದರ್ಶನ್ ರನ್ನು ಭೇಟಿ ಮಾಡಲು ಜೈಲಿಗೆ ಬರುವ ಕುಟುಂಬಸ್ಥರು ಹಾಗೂ ಇತರೆ ಸ್ನೇಹಿತರ ಕಾರಿನ ಮೇಲೇಯೇ ಕ್ಯಾಮೆರಾಗಳನ್ನು ಹಿಡಿದುಕೊಂಡು ಮುಗಿಬೀಳು ತ್ತಿದ್ದಾರೆ. ಇದರ ಅಗತ್ಯ ಇದೆಯೇ? ಅಲ್ಲದೆ ಇತರೆ ನಟರ ಬಳಿ ಹೋಗಿ ಅವರಿಗೆ ಇಷ್ಟವಿಲ್ಲದಿದ್ದರೂ ದರ್ಶನ್ ಬಗ್ಗೆ ಪ್ರಶ್ನಿಸಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಇದರಿಂದಾಗಿ ಮಾಧ್ಯಮಗಳು ಸಮಾಜಕ್ಕೆ ನೀಡುವ ಸಂದೇಶವಾದರೂ ಏನು? ಹೀಗಾದರೆ ಜನರು ಮಾಧ್ಯಮಗಳ ಮೇಲೆ ವಿಶ್ವಾಸ ಇಡುವುದಾದರೂ ಹೇಗೆ? ಮುಂದಾದರೂ ಮಾಧ್ಯಮ ಗಳು ಜವಾಬ್ದಾರಿಯಿಂದ ವರ್ತಿಸಿ ಮೌಲ್ಯಯುತ ಸುದ್ದಿ ಬಿತ್ತರಿಸಲಿ.

-ಸಂಜಯ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

2 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

2 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

2 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

2 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

12 hours ago