ಓದುಗರ ಪತ್ರ

ಓದುಗರ ಪತ್ರ| ಮೌಲ್ಯ ಕಳೆದುಕೊಳ್ಳುತ್ತಿರುವ ಮಾಧ್ಯಮಗಳು

ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ.

ಇತ್ತೀಚೆಗೆ ಸುದ್ದಿ ವಾಹಿನಿಗಳ ಸಂಖ್ಯೆ ಹೆಚ್ಚಾಗಿದ್ದು, ಆನ್‌ಲೈನ್ ಮಾಧ್ಯಮಗಳು, ಯೂಟ್ಯೂಬ್ ಚಾನೆಲ್‌ಗಳು ಬಂದ ಮೇಲಂತೂ ಮಾಧ್ಯಮಗಳು ಮೌಲ್ಯಯುತ ಸುದ್ದಿ ಬಿತ್ತರಿಸುವು ದನ್ನೇ ಮರೆತುಬಿಟ್ಟಿವೆ ಎನ್ನಬಹುದು.
ನಟದರ್ಶನ್ ಪ್ರಕರಣವನ್ನೇ ತೆಗೆದುಕೊಳ್ಳೋಣ. ಆ ಪ್ರಕರಣ ತನಿಖೆ ಹಂತದಲ್ಲಿದ್ದು, ತನಿಖೆಯ
ವಿಚಾರಗಳನ್ನು ಪೊಲೀಸರು ಈವರೆಗೂ ಬಹಿರಂಗಪಡಿಸಿಲ್ಲ. ಅಲ್ಲದೇ ಜೈಲಿನಲ್ಲಿಯೂ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ವಿಚಾರವೂ ಯಾರಿಗೂ ಗೊತ್ತಿಲ್ಲ. ಆದರೆ ಮಾಧ್ಯಮಗಳು ಮಾತ್ರ ಈ ಬಗ್ಗೆ ಕಲ್ಪಿತ ವರದಿಗಳನ್ನು ಪ್ರಕಟಿಸುತ್ತಾ ಜನರಲ್ಲಿ ಗೊಂದಲ ಸೃಷ್ಟಿಸಿವೆ. ಕೆಲ ವರದಿಗಾರರು ದರ್ಶನ್ ರನ್ನು ಭೇಟಿ ಮಾಡಲು ಜೈಲಿಗೆ ಬರುವ ಕುಟುಂಬಸ್ಥರು ಹಾಗೂ ಇತರೆ ಸ್ನೇಹಿತರ ಕಾರಿನ ಮೇಲೇಯೇ ಕ್ಯಾಮೆರಾಗಳನ್ನು ಹಿಡಿದುಕೊಂಡು ಮುಗಿಬೀಳು ತ್ತಿದ್ದಾರೆ. ಇದರ ಅಗತ್ಯ ಇದೆಯೇ? ಅಲ್ಲದೆ ಇತರೆ ನಟರ ಬಳಿ ಹೋಗಿ ಅವರಿಗೆ ಇಷ್ಟವಿಲ್ಲದಿದ್ದರೂ ದರ್ಶನ್ ಬಗ್ಗೆ ಪ್ರಶ್ನಿಸಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಇದರಿಂದಾಗಿ ಮಾಧ್ಯಮಗಳು ಸಮಾಜಕ್ಕೆ ನೀಡುವ ಸಂದೇಶವಾದರೂ ಏನು? ಹೀಗಾದರೆ ಜನರು ಮಾಧ್ಯಮಗಳ ಮೇಲೆ ವಿಶ್ವಾಸ ಇಡುವುದಾದರೂ ಹೇಗೆ? ಮುಂದಾದರೂ ಮಾಧ್ಯಮ ಗಳು ಜವಾಬ್ದಾರಿಯಿಂದ ವರ್ತಿಸಿ ಮೌಲ್ಯಯುತ ಸುದ್ದಿ ಬಿತ್ತರಿಸಲಿ.

-ಸಂಜಯ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

6 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

7 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

9 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

10 hours ago