ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ.
ಇತ್ತೀಚೆಗೆ ಸುದ್ದಿ ವಾಹಿನಿಗಳ ಸಂಖ್ಯೆ ಹೆಚ್ಚಾಗಿದ್ದು, ಆನ್ಲೈನ್ ಮಾಧ್ಯಮಗಳು, ಯೂಟ್ಯೂಬ್ ಚಾನೆಲ್ಗಳು ಬಂದ ಮೇಲಂತೂ ಮಾಧ್ಯಮಗಳು ಮೌಲ್ಯಯುತ ಸುದ್ದಿ ಬಿತ್ತರಿಸುವು ದನ್ನೇ ಮರೆತುಬಿಟ್ಟಿವೆ ಎನ್ನಬಹುದು.
ನಟದರ್ಶನ್ ಪ್ರಕರಣವನ್ನೇ ತೆಗೆದುಕೊಳ್ಳೋಣ. ಆ ಪ್ರಕರಣ ತನಿಖೆ ಹಂತದಲ್ಲಿದ್ದು, ತನಿಖೆಯ
ವಿಚಾರಗಳನ್ನು ಪೊಲೀಸರು ಈವರೆಗೂ ಬಹಿರಂಗಪಡಿಸಿಲ್ಲ. ಅಲ್ಲದೇ ಜೈಲಿನಲ್ಲಿಯೂ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ವಿಚಾರವೂ ಯಾರಿಗೂ ಗೊತ್ತಿಲ್ಲ. ಆದರೆ ಮಾಧ್ಯಮಗಳು ಮಾತ್ರ ಈ ಬಗ್ಗೆ ಕಲ್ಪಿತ ವರದಿಗಳನ್ನು ಪ್ರಕಟಿಸುತ್ತಾ ಜನರಲ್ಲಿ ಗೊಂದಲ ಸೃಷ್ಟಿಸಿವೆ. ಕೆಲ ವರದಿಗಾರರು ದರ್ಶನ್ ರನ್ನು ಭೇಟಿ ಮಾಡಲು ಜೈಲಿಗೆ ಬರುವ ಕುಟುಂಬಸ್ಥರು ಹಾಗೂ ಇತರೆ ಸ್ನೇಹಿತರ ಕಾರಿನ ಮೇಲೇಯೇ ಕ್ಯಾಮೆರಾಗಳನ್ನು ಹಿಡಿದುಕೊಂಡು ಮುಗಿಬೀಳು ತ್ತಿದ್ದಾರೆ. ಇದರ ಅಗತ್ಯ ಇದೆಯೇ? ಅಲ್ಲದೆ ಇತರೆ ನಟರ ಬಳಿ ಹೋಗಿ ಅವರಿಗೆ ಇಷ್ಟವಿಲ್ಲದಿದ್ದರೂ ದರ್ಶನ್ ಬಗ್ಗೆ ಪ್ರಶ್ನಿಸಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಇದರಿಂದಾಗಿ ಮಾಧ್ಯಮಗಳು ಸಮಾಜಕ್ಕೆ ನೀಡುವ ಸಂದೇಶವಾದರೂ ಏನು? ಹೀಗಾದರೆ ಜನರು ಮಾಧ್ಯಮಗಳ ಮೇಲೆ ವಿಶ್ವಾಸ ಇಡುವುದಾದರೂ ಹೇಗೆ? ಮುಂದಾದರೂ ಮಾಧ್ಯಮ ಗಳು ಜವಾಬ್ದಾರಿಯಿಂದ ವರ್ತಿಸಿ ಮೌಲ್ಯಯುತ ಸುದ್ದಿ ಬಿತ್ತರಿಸಲಿ.
-ಸಂಜಯ್, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…