ಓದುಗರ ಪತ್ರ| ಜಮೀರ್‌ರನ್ನು ಸಂಪುಟದಿಂದ ವಜಾಗೊಳಿಸಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರದ ವೇಳೆ ‘ಮುಸ್ಲಿಂ ಸಮುದಾಯದವರು ಒಂದೊಂದು ರೂಪಾಯಿ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡ ಕುಟುಂಬವನ್ನು ಖರೀದಿ ಮಾಡುತ್ತೇವೆ’ ಎಂದು ವ್ಯಂಗ್ಯವಾಡಿದ್ದ ಸಚಿವ ಜಮೀರ್ ಅಹಮದ್‌ ಖಾನ್, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಯವರನ್ನು ‘ಕರಿಯ’ ಎಂದು ಕರೆಯುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ.

ಇದೊಂದು ಅಧಿಕಾರ ಅಮಲು ಮತ್ತು ದುರಹಂಕಾರದ ಪರಮಾವಧಿ ಎಂದೇ ಹೇಳಬಹುದು. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಮೀರ್‌ಗೆ ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಸೌಜನ್ಯವೇ ಇಲ್ಲದಿರುವುದು ಬೇಸರದ ಸಂಗತಿ. ಕಳೆದ ವರ್ಷವೂ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಟ್ಟುಕೊಂಡು ಒಕ್ಕಲಿಗ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ್ದರು. ಬಳಿಕ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದರು. ರಾಜ್ಯದಲ್ಲಿ ಎಲ್ಲ ಸಮುದಾಯದವರೂ ಸಹಬಾಳ್ವೆಯಿಂದ ಇರುವಾಗ ಜಮೀರ್‌ನಂತಹ ಕೆಲವು ನಾಯಕರು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ಖಂಡನೀಯ. ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದ ಸದಸ್ಯರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವುದನ್ನು ಬಿಟ್ಟುಅವರಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಿಷ್ಟೇ ಅಲ್ಲದೆ ಈಗ ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯೂ ಕೆಲ ನಾಯಕರು ಹಗುರವಾಗಿ ನಾಲಿಗೆ ಹರಿಬಿಡುತ್ತಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago