ಮೈಸೂರಿನ ಕೆಆರ್ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ ಕಾರಣಕ್ಕಾಗಿ ಈಗ ಆ ರಸ್ತೆಯ ಹೆಸರು ಬದಲಾವಣೆ ಮಾಡುವುದು ಎಷ್ಟು ಸರಿ? ಹಿಂದೆಲ್ಲಾ ಸಾಧಕ ವ್ಯಕ್ತಿಗಳು ಸಾವನ್ನಪ್ಪಿದ ಬಳಿಕ ಅವರ ಸ್ಮರಣಾರ್ಥವಾಗಿ ಅವರ ಹೆಸರುಗಳನ್ನು ರಸ್ತೆಗಳಿಗೆ, ಉದ್ಯಾನವನಗಳಿಗೆ ಹಾಗೂ ವೃತ್ತಗಳಿಗೆ ಇಡಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಬದುಕಿರುವ ವ್ಯಕ್ತಿಗಳ ಹೆಸರುಗಳನ್ನು ರಸ್ತೆಗಳಿಗೆ ಇಡುವ ಪರಿಪಾಠ ಶುರುವಾಗಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅದರ ಬಗ್ಗೆ ಎರಡು ಮಾತಿಲ್ಲ. ಅವರ ಆಡಳಿತಾವಽಯಲ್ಲಿ ಮೈಸೂರಿನಲ್ಲಿ ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳೂ ಸ್ಥಾಪನೆಯಾಗಿವೆ. ರೈತರ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದಾರೆ. ಅದನ್ನು ಸ್ಮರಿಸಬೇಕು. ಆದರೆ, ಅದಕ್ಕಾಗಿ ರಸ್ತೆಯೊಂದಕ್ಕೆ ಈಗಿರುವ ಹೆಸರನ್ನು ತೆಗೆದು ಅವರ ಹೆಸರನ್ನು ಮರನಾಮಕರಣ ಮಾಡುವುದು ಅಷ್ಟೇನೂ ಸರಿ ಕಾಣದು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…