ಮೈಸೂರಿನ ಕೆಆರ್ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ ಕಾರಣಕ್ಕಾಗಿ ಈಗ ಆ ರಸ್ತೆಯ ಹೆಸರು ಬದಲಾವಣೆ ಮಾಡುವುದು ಎಷ್ಟು ಸರಿ? ಹಿಂದೆಲ್ಲಾ ಸಾಧಕ ವ್ಯಕ್ತಿಗಳು ಸಾವನ್ನಪ್ಪಿದ ಬಳಿಕ ಅವರ ಸ್ಮರಣಾರ್ಥವಾಗಿ ಅವರ ಹೆಸರುಗಳನ್ನು ರಸ್ತೆಗಳಿಗೆ, ಉದ್ಯಾನವನಗಳಿಗೆ ಹಾಗೂ ವೃತ್ತಗಳಿಗೆ ಇಡಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಬದುಕಿರುವ ವ್ಯಕ್ತಿಗಳ ಹೆಸರುಗಳನ್ನು ರಸ್ತೆಗಳಿಗೆ ಇಡುವ ಪರಿಪಾಠ ಶುರುವಾಗಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅದರ ಬಗ್ಗೆ ಎರಡು ಮಾತಿಲ್ಲ. ಅವರ ಆಡಳಿತಾವಽಯಲ್ಲಿ ಮೈಸೂರಿನಲ್ಲಿ ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳೂ ಸ್ಥಾಪನೆಯಾಗಿವೆ. ರೈತರ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದಾರೆ. ಅದನ್ನು ಸ್ಮರಿಸಬೇಕು. ಆದರೆ, ಅದಕ್ಕಾಗಿ ರಸ್ತೆಯೊಂದಕ್ಕೆ ಈಗಿರುವ ಹೆಸರನ್ನು ತೆಗೆದು ಅವರ ಹೆಸರನ್ನು ಮರನಾಮಕರಣ ಮಾಡುವುದು ಅಷ್ಟೇನೂ ಸರಿ ಕಾಣದು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…