ಓದುಗರ ಪತ್ರ

ಓದುಗರ ಪತ್ರ | ರಸ್ತೆಯ ಹೆಸರು ಬದಲಾವಣೆ ಬೇಡ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ ಕಾರಣಕ್ಕಾಗಿ ಈಗ ಆ ರಸ್ತೆಯ ಹೆಸರು ಬದಲಾವಣೆ ಮಾಡುವುದು ಎಷ್ಟು ಸರಿ? ಹಿಂದೆಲ್ಲಾ ಸಾಧಕ ವ್ಯಕ್ತಿಗಳು ಸಾವನ್ನಪ್ಪಿದ ಬಳಿಕ ಅವರ ಸ್ಮರಣಾರ್ಥವಾಗಿ ಅವರ ಹೆಸರುಗಳನ್ನು ರಸ್ತೆಗಳಿಗೆ, ಉದ್ಯಾನವನಗಳಿಗೆ ಹಾಗೂ ವೃತ್ತಗಳಿಗೆ ಇಡಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಬದುಕಿರುವ ವ್ಯಕ್ತಿಗಳ ಹೆಸರುಗಳನ್ನು ರಸ್ತೆಗಳಿಗೆ ಇಡುವ ಪರಿಪಾಠ ಶುರುವಾಗಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅದರ ಬಗ್ಗೆ ಎರಡು ಮಾತಿಲ್ಲ. ಅವರ ಆಡಳಿತಾವಽಯಲ್ಲಿ ಮೈಸೂರಿನಲ್ಲಿ ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳೂ ಸ್ಥಾಪನೆಯಾಗಿವೆ. ರೈತರ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದಾರೆ. ಅದನ್ನು ಸ್ಮರಿಸಬೇಕು. ಆದರೆ, ಅದಕ್ಕಾಗಿ ರಸ್ತೆಯೊಂದಕ್ಕೆ ಈಗಿರುವ ಹೆಸರನ್ನು ತೆಗೆದು ಅವರ ಹೆಸರನ್ನು ಮರನಾಮಕರಣ ಮಾಡುವುದು ಅಷ್ಟೇನೂ ಸರಿ ಕಾಣದು.

-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

20 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago