ರಾಜ್ಯದಲ್ಲಿ ವಕ್ಛ್ ಮಂಡಳಿಯು ರೈತರ ಭೂಮಿಗಳನ್ನು ಕಬಳಿಸುತ್ತಿದೆ ಎಂಬ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲು ಮುಂದಾಗಿದೆ.
ರಾಜ್ಯದಲ್ಲಿ ಅನೇಕ ಕುಟುಂಬಗಳು ಬಡತನ ರೇಖೆಗಿಂತ ಮೇಲಿದ್ದರೂ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿವೆ. ಅಂತಹವರ ಪಡಿತರ ಚೀಟಿಗಳನ್ನು ಅನರ್ಹ ಗೊಳಿಸುವುದರಲ್ಲಿ ಅರ್ಥವಿದೆ. ಆದರೆ ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದು ಯಾವ ನ್ಯಾಯ? ಇದು ನಿಜಕ್ಕೂ ಖಂಡನೀಯ.
ರಾಜ್ಯದಲ್ಲಿನ ಕೂಲಿ ಕಾರ್ಮಿಕರು, ಆಟೋ ಚಾಲಕರು, ನೌಕರರು, ಸಣ್ಣಪುಟ್ಟ ವ್ಯಾಪಾರ ಮಾಡುವವರು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಪಡಿತರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಸರ್ಕಾರ ಉಳ್ಳವರ ಪಡಿತರ ಚೀಟಿಗಳನ್ನು ರದ್ದು ಮಾಡುವ ಸಲುವಾಗಿ ದಿನಗೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನೂ ರದ್ದು ಮಾಡಿದರೆ ಅದು ಅವರ ಅನ್ನವನ್ನು ಕಸಿದಂತಾಗುತ್ತದೆ. ಆದ್ದರಿಂದ ಸರ್ಕಾರ ಇಂತಹ ನಿರ್ಧಾರ ಗಳನ್ನು ತೆಗೆದುಕೊಳ್ಳುವ ಮುನ್ನ ಸರಿಯಾಗಿ ಪರಿಶೀಲಿಸಿ ನಿಜವಾದ ಫಲಾನು ಭವಿಗಳಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲಿ.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…