ರಾಜ್ಯದಲ್ಲಿ ವಕ್ಛ್ ಮಂಡಳಿಯು ರೈತರ ಭೂಮಿಗಳನ್ನು ಕಬಳಿಸುತ್ತಿದೆ ಎಂಬ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲು ಮುಂದಾಗಿದೆ.
ರಾಜ್ಯದಲ್ಲಿ ಅನೇಕ ಕುಟುಂಬಗಳು ಬಡತನ ರೇಖೆಗಿಂತ ಮೇಲಿದ್ದರೂ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿವೆ. ಅಂತಹವರ ಪಡಿತರ ಚೀಟಿಗಳನ್ನು ಅನರ್ಹ ಗೊಳಿಸುವುದರಲ್ಲಿ ಅರ್ಥವಿದೆ. ಆದರೆ ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದು ಯಾವ ನ್ಯಾಯ? ಇದು ನಿಜಕ್ಕೂ ಖಂಡನೀಯ.
ರಾಜ್ಯದಲ್ಲಿನ ಕೂಲಿ ಕಾರ್ಮಿಕರು, ಆಟೋ ಚಾಲಕರು, ನೌಕರರು, ಸಣ್ಣಪುಟ್ಟ ವ್ಯಾಪಾರ ಮಾಡುವವರು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗುವ ಪಡಿತರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಸರ್ಕಾರ ಉಳ್ಳವರ ಪಡಿತರ ಚೀಟಿಗಳನ್ನು ರದ್ದು ಮಾಡುವ ಸಲುವಾಗಿ ದಿನಗೂಲಿ ಕಾರ್ಮಿಕರ ಪಡಿತರ ಚೀಟಿಗಳನ್ನೂ ರದ್ದು ಮಾಡಿದರೆ ಅದು ಅವರ ಅನ್ನವನ್ನು ಕಸಿದಂತಾಗುತ್ತದೆ. ಆದ್ದರಿಂದ ಸರ್ಕಾರ ಇಂತಹ ನಿರ್ಧಾರ ಗಳನ್ನು ತೆಗೆದುಕೊಳ್ಳುವ ಮುನ್ನ ಸರಿಯಾಗಿ ಪರಿಶೀಲಿಸಿ ನಿಜವಾದ ಫಲಾನು ಭವಿಗಳಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲಿ.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…