ಓದುಗರ ಪತ್ರ

ಓದುಗರ ಪತ್ರ: ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನು ರೂಪಿಸಿ

ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಪ್ರಶ್ನೆ ಮೂಡಿದೆ.

ಮೊನ್ನೆ ಮೊನ್ನೆ ಕೊಲ್ಕತ್ತಾದಲ್ಲಿ ವೈದ್ಯಕೀಯ ಮೇಲೆ ವಿದ್ಯಾರ್ಥಿನಿಯ ಸಾಮೂಹಿಕವಾಗಿ ಅತ್ಯಾಚಾರ ವೆಸಗಿದಲ್ಲದೇ ಆಕೆ ಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಕೃತ್ಯವನ್ನು ಖಂಡಿಸಿ ದೇಶದಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇತ್ತೀಚೆಗಂತೂ ಇಂತಹ ಅತ್ಯಾಚಾರ, ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ. ಹೋಟೆಲ್‌ಗಳ ಶೌಚಾಲಯಗಳು, ರೂಂಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಇಟ್ಟು ಮಹಿಳೆಯರ ಖಾಸಗಿತನವನ್ನು ಚಿತ್ರೀಕರಣ ಮಾಡುವುದು, ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೂ ಅತ್ಯಾಚಾರವೆಸಗುವಂತಹ ಹೀನ ಕೃತ್ಯಗಳು ವರದಿಯಾಗುತ್ತಲೇ ಇವೆ. ಆದ್ದರಿಂದ ಸರ್ಕಾರಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ ಮಹಿಳೆಯರ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ರೂಪಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

1 hour ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

1 hour ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

1 hour ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

1 hour ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

1 hour ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

1 hour ago