ಓದುಗರ ಪತ್ರ

ಓದುಗರ ಪತ್ರ| ಈ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸಿ

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ.

ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ ವಿಭಾಗದಲ್ಲಿ ಭಾರತಕ್ಕೆ ಸಿಕ್ಕ ಮೊತ್ತ ಮೊದಲ ಚನದ ಪದಕ ಇದಾಗಿದೆ.

ಇನ್ನು ಪುರುಷರ ಎಫ್51 ಕ್ಲಬ್ ಥೋ ಸ್ಪರ್ಧೆಯಲ್ಲಿ ಧರಮ್‌ ಬೀರ್ ಮತ್ತು ಪ್ರಣವ್ ಸೂರ್ಮ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದುಕೊಟ್ಟರು. ಕ್ರೀಡಾಕೂಟದ 7ನೇ ದಿನ ಪುರುಷರ ಎಫ್46 ವಿಭಾಗದ ಶಾಟ್ ಪುಟ್ ಸ್ಪರ್ಧೆಯಲ್ಲಿ ಸಚಿನ್ ಖಿಲಾರಿ ಬೆಳ್ಳಿ ಗಳಿಸಿದರು.

ಇನ್ನು ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್ ಬೆಳ್ಳಿ, ಡಿಸ್ಕಸ್ ಎಸತೆದಲ್ಲಿ ಯೋಗೇಶ್ ಕಾಥುನಿಯಾ ಬೆಳ್ಳಿ, ಜಾವೆಲಿನ್ ತಾರೆ ಸುಮಿತ್ ಅಂತಿಲ್ ಚಿನ್ನ ಪಡೆದಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕರು, ಸಿನಿಮಾ ನಟ-ನಟಿಯರು, ಕ್ರೀಡಾಪಟುಗಳು ಅಭಿನಂದಿಸಿದರು. ಅಲ್ಲದೆ ಅನೇಕ ಉಡುಗರೆಗಳನ್ನೂ ನೀಡಿದ್ದರು. ಆದರೆ ಪ್ಯಾರಾಲಿಂಪಿಕ್ಸ್‌ನಲ್ಲಿ 24 ಪದಕಗಳನ್ನು ಕ್ರೀಡಾಪಟುಗಳು ಗೆದ್ದಿದ್ದರೂ ಈವರೆಗೂ ಅವರಿಗೆ ಸೂಕ್ತ ರೀತಿಯಲ್ಲಿ ಅಭಿನಂದನೆ ಸಲ್ಲಿಸುವುದಾಗಲಿ ಇತರೆ ಕ್ರೀಡಾಪಟುಗಳಿಗೆ ನೀಡುವಂತೆ ಪ್ಯಾರಾ ಕ್ರೀಡಾಪಟುಗಳಿಗೂ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಲಿ ಮಾಡಿಲ್ಲದಿರುವುದು ಬೇಸರದ ಸಂಗತಿ. ಈ ಕ್ರೀಡಾಪಟುಗಳನ್ನೂ ಗೌರವಿಸಬೇಕಾದದ್ದು ಸರ್ಕಾರದ ಕರ್ತವ್ಯ.

-ಎಸ್.ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

5 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

6 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

6 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

6 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

6 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

6 hours ago