ಓದುಗರ ಪತ್ರ

ಓದುಗರ ಪತ್ರ| ಈ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸಿ

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ.

ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ ವಿಭಾಗದಲ್ಲಿ ಭಾರತಕ್ಕೆ ಸಿಕ್ಕ ಮೊತ್ತ ಮೊದಲ ಚನದ ಪದಕ ಇದಾಗಿದೆ.

ಇನ್ನು ಪುರುಷರ ಎಫ್51 ಕ್ಲಬ್ ಥೋ ಸ್ಪರ್ಧೆಯಲ್ಲಿ ಧರಮ್‌ ಬೀರ್ ಮತ್ತು ಪ್ರಣವ್ ಸೂರ್ಮ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದುಕೊಟ್ಟರು. ಕ್ರೀಡಾಕೂಟದ 7ನೇ ದಿನ ಪುರುಷರ ಎಫ್46 ವಿಭಾಗದ ಶಾಟ್ ಪುಟ್ ಸ್ಪರ್ಧೆಯಲ್ಲಿ ಸಚಿನ್ ಖಿಲಾರಿ ಬೆಳ್ಳಿ ಗಳಿಸಿದರು.

ಇನ್ನು ಹೈ ಜಂಪ್‌ನಲ್ಲಿ ನಿಶಾದ್ ಕುಮಾರ್ ಬೆಳ್ಳಿ, ಡಿಸ್ಕಸ್ ಎಸತೆದಲ್ಲಿ ಯೋಗೇಶ್ ಕಾಥುನಿಯಾ ಬೆಳ್ಳಿ, ಜಾವೆಲಿನ್ ತಾರೆ ಸುಮಿತ್ ಅಂತಿಲ್ ಚಿನ್ನ ಪಡೆದಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕರು, ಸಿನಿಮಾ ನಟ-ನಟಿಯರು, ಕ್ರೀಡಾಪಟುಗಳು ಅಭಿನಂದಿಸಿದರು. ಅಲ್ಲದೆ ಅನೇಕ ಉಡುಗರೆಗಳನ್ನೂ ನೀಡಿದ್ದರು. ಆದರೆ ಪ್ಯಾರಾಲಿಂಪಿಕ್ಸ್‌ನಲ್ಲಿ 24 ಪದಕಗಳನ್ನು ಕ್ರೀಡಾಪಟುಗಳು ಗೆದ್ದಿದ್ದರೂ ಈವರೆಗೂ ಅವರಿಗೆ ಸೂಕ್ತ ರೀತಿಯಲ್ಲಿ ಅಭಿನಂದನೆ ಸಲ್ಲಿಸುವುದಾಗಲಿ ಇತರೆ ಕ್ರೀಡಾಪಟುಗಳಿಗೆ ನೀಡುವಂತೆ ಪ್ಯಾರಾ ಕ್ರೀಡಾಪಟುಗಳಿಗೂ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಲಿ ಮಾಡಿಲ್ಲದಿರುವುದು ಬೇಸರದ ಸಂಗತಿ. ಈ ಕ್ರೀಡಾಪಟುಗಳನ್ನೂ ಗೌರವಿಸಬೇಕಾದದ್ದು ಸರ್ಕಾರದ ಕರ್ತವ್ಯ.

-ಎಸ್.ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago