ಆಗಸ್ಟ್ 28ರಿಂದ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ.
ಪ್ಯಾರಾಲಿಂಪಿಕ್ಸ್ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್ನ ಬಿಲ್ಲುಗಾರಿಕೆ ವಿಭಾಗದಲ್ಲಿ ಭಾರತಕ್ಕೆ ಸಿಕ್ಕ ಮೊತ್ತ ಮೊದಲ ಚನದ ಪದಕ ಇದಾಗಿದೆ.
ಇನ್ನು ಪುರುಷರ ಎಫ್51 ಕ್ಲಬ್ ಥೋ ಸ್ಪರ್ಧೆಯಲ್ಲಿ ಧರಮ್ ಬೀರ್ ಮತ್ತು ಪ್ರಣವ್ ಸೂರ್ಮ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದುಕೊಟ್ಟರು. ಕ್ರೀಡಾಕೂಟದ 7ನೇ ದಿನ ಪುರುಷರ ಎಫ್46 ವಿಭಾಗದ ಶಾಟ್ ಪುಟ್ ಸ್ಪರ್ಧೆಯಲ್ಲಿ ಸಚಿನ್ ಖಿಲಾರಿ ಬೆಳ್ಳಿ ಗಳಿಸಿದರು.
ಇನ್ನು ಹೈ ಜಂಪ್ನಲ್ಲಿ ನಿಶಾದ್ ಕುಮಾರ್ ಬೆಳ್ಳಿ, ಡಿಸ್ಕಸ್ ಎಸತೆದಲ್ಲಿ ಯೋಗೇಶ್ ಕಾಥುನಿಯಾ ಬೆಳ್ಳಿ, ಜಾವೆಲಿನ್ ತಾರೆ ಸುಮಿತ್ ಅಂತಿಲ್ ಚಿನ್ನ ಪಡೆದಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕರು, ಸಿನಿಮಾ ನಟ-ನಟಿಯರು, ಕ್ರೀಡಾಪಟುಗಳು ಅಭಿನಂದಿಸಿದರು. ಅಲ್ಲದೆ ಅನೇಕ ಉಡುಗರೆಗಳನ್ನೂ ನೀಡಿದ್ದರು. ಆದರೆ ಪ್ಯಾರಾಲಿಂಪಿಕ್ಸ್ನಲ್ಲಿ 24 ಪದಕಗಳನ್ನು ಕ್ರೀಡಾಪಟುಗಳು ಗೆದ್ದಿದ್ದರೂ ಈವರೆಗೂ ಅವರಿಗೆ ಸೂಕ್ತ ರೀತಿಯಲ್ಲಿ ಅಭಿನಂದನೆ ಸಲ್ಲಿಸುವುದಾಗಲಿ ಇತರೆ ಕ್ರೀಡಾಪಟುಗಳಿಗೆ ನೀಡುವಂತೆ ಪ್ಯಾರಾ ಕ್ರೀಡಾಪಟುಗಳಿಗೂ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಲಿ ಮಾಡಿಲ್ಲದಿರುವುದು ಬೇಸರದ ಸಂಗತಿ. ಈ ಕ್ರೀಡಾಪಟುಗಳನ್ನೂ ಗೌರವಿಸಬೇಕಾದದ್ದು ಸರ್ಕಾರದ ಕರ್ತವ್ಯ.
-ಎಸ್.ಮಹೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…