ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್ ನಿಷೇಧ ಎಂಬ ಬೋರ್ಡ್ಗಳನ್ನು ಹಾಕಿರುವುದು ಕಂಡು ಬಂದಿದ್ದು, ಇದು ಶ್ರೀಮಂತರ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಒಂದೆಡೆ ಕಟ್ಟಡದ ಮಾಲೀಕರ ಅಮಾನವೀಯ ನಿಯಮಗಳು, ಇನ್ನೊಂದೆಡೆ ಹೇಗಾದರೂ ಮಾಡಿ ಮೇಲೆ ಬನ್ನಿ ಎಂದು ಹಠ ಹಿಡಿಯುವ ಕಲ್ಲುಹೃದಯದ ಗ್ರಾಹಕರು. ಹಸಿದವನಿಗೆ ಅನ್ನ ನೀಡುವವನನ್ನು ಮೆಟ್ಟಿಲು ಹತ್ತಿಸುವುದು ಯಾವ ನ್ಯಾಯ? ನಾವು ತಾಂತ್ರಿಕವಾಗಿ ಮುಂದುವರಿದಿರಬಹುದು, ಆದರೆ ಸಾಂಸ್ಕೃತಿಕವಾಗಿ ಅಧಃಪತನ ಹೊಂದುತ್ತಿದ್ದೇವೆ. ಇಂತಹ ಶೋಷಣೆಯ ವಿರುದ್ಧ ಧ್ವನಿ ಎತ್ತದಿದ್ದರೆ, ನಮ್ಮದು ನಾಗರಿಕ ಸಮಾಜ ಎಂದು ಕರೆದುಕೊಳ್ಳಲು ಅನರ್ಹರು. ಇಂದೇ ಈ ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ.
-ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…