ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ.
ನಂತರದ ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಕಟ್ಟುವವರಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ, ನಂತರ ತೆರಿಗೆ ಪಾವತಿಸುವವರಿಗೆ, ಪ್ರತಿ ತಿಂಗಳಿಗೆ, ಶೇ.2ರಷ್ಟು ಬಡ್ಡಿ ದರದಲ್ಲಿ ವರ್ಷಕ್ಕೆ ಶೇ. 24ರಷ್ಟು ಬಡ್ಡಿ ವಿಧಿಸುತ್ತಾರೆ. ಬಹುಶಃ ಇದು ಯಾವುದೇ ದೇಶದಲ್ಲೂ ಇಲ್ಲ. ಇದೊಂದು ರೀತಿಯಲ್ಲಿ ನಗರ ಪಾಲಿಕೆಯ ಅವೈಜ್ಞಾನಿಕ ತೆರಿಗೆ ನೀತಿಯಾಗಿದೆ. ಸಾರ್ವಜನಿಕರಿಗೆ ಆಗುತ್ತಿರುವ ಈ ಅನ್ಯಾಯವನ್ನು ಯಾವ ಜನಪ್ರತಿನಿಧಿಗಳೂ ಪ್ರಶ್ನಿಸುತ್ತಿಲ್ಲ, ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವರ್ಷಕ್ಕಿಂತ ಶೇ. 3ರಷ್ಟು ಆಸ್ತಿ ತೆರಿಗೆಯನ್ನು ಈ ವರ್ಷ ಏಕಾಏಕಿ ಏರಿಕೆ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಇಲ್ಲದೇ ಇರುವಾಗ ಕೌನ್ಸಿಲ್ ಸಭೆ ನಡೆಯದೇ ನಗರ ಪಾಲಿಕೆಯ ಆಯುಕ್ತರೇ ಈ ತೀರ್ಮಾನ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆಯೇ? ಈಗಾಗಲೇ ಈ ವರ್ಷ ಶೇ.3ರಷ್ಟು ಹೆಚ್ಚು ಆಸ್ತಿ ತೆರಿಗೆಯನ್ನು ಕಟ್ಟಿರುವ ಸಾರ್ವಜನಿಕರಿಗೆ ಹಣ ಹಿಂದಿರುಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…