ಓದುಗರ ಪತ್ರ

ಓದುಗರ ಪತ್ರ | ಪರಿಸರ ಸಂರಕ್ಷಣೆ ಅತ್ಯಗತ್ಯ

ದೇಶದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗ ಹಲವೆಡೆ ಭೂ ಕುಸಿತ, ಜಲಪ್ರಳಯ ಸಂಭವಿಸುತ್ತಿದ್ದು, ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಜಲಪ್ರಳಯ ನೂರಾರು ಜನರನ್ನು ಬಲಿ ಪಡೆದಿದೆ.

ಈ ಭೀಕರ ಜಲಪ್ರಳಯ ಬೆಟ್ಟಗುಡ್ಡಗಳ ತಪ್ಪಲಿ ನಲ್ಲಿ ವಾಸಿಸುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಜನರು ಅಭಿವೃದ್ಧಿಯ ಹೆಸರಿನಲ್ಲಿ ಬೆಟ್ಟ ಗುಡ್ಡಗಳನ್ನು ಕೊರೆದು, ಕಾಡುಗಳನ್ನು ನಾಶ ಮಾಡಿ ರಸ್ತೆಗಳು, ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇದರಿಂದಾಗಿ ಆ ಬೆಟ್ಟ-ಗುಡ್ಡಗಳು ಸಡಿಲಗೊಂಡು ಮಳೆ ಹೆಚ್ಚಾದಾಗ ಭೂ ಕುಸಿತಗಳಾಗುತ್ತಿವೆ.

ನಾವು ಪ್ರಕೃತಿಯನ್ನು ನಾಶ ಮಾಡಿದಷ್ಟೂ ಆಗಾಗ್ಗೆ ಪ್ರಕೃತಿಯೂ ನಮಗೆ ಪಾಠ ಕಲಿಸುತ್ತಲೇ ಇರುತ್ತದೆ. ಇಷ್ಟಿದ್ದರೂ ಮನುಷ್ಯ ಪಾಠ ಕಲಿಯದೆ ಪ್ರಕೃತಿ ಮೇಲಿನ ದಾಳಿಯನ್ನು ಮುಂದುವರಿಸುತ್ತಿದ್ದಾನೆ. ಇನ್ನು ಮುಂದಾದರೂ ಮನುಷ್ಯ ಪರಿಸರ ಸಂರಕ್ಷಿಸುವುದನ್ನು ಕಲಿತು ಪ್ರಕೃತಿ ಸ್ನೇಹಿ ಅಭಿವೃದ್ಧಿ ಕೆಲಸಗಳತ್ತ ಮುಖ ಮಾಡಬೇಕು.

– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago