ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ ಎಂದು ಸರ್ಕಾರದ ಪರವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ. ಎಲ್ಲರೂ ಇದನ್ನು ಪಾಲಿಸಲು ಸಾಧ್ಯವೇ ಇಲ್ಲ. ತಮ್ಮ ಸ್ವಂತ ಕೆಲಸ ಕಾರ್ಯಗಳಿಗಾಗಿ ಮಧ್ಯಾಹ್ನ ವೇಳೆಯಲ್ಲೂ ಮನೆಯಿಂದ ಹೊರಗೆ ಹೋಗಬೇಕಾದ ಅನಿವಾರ್ಯತೆ ಇರುತ್ತದೆ.
ಆದರೆ ಬೇಸಿಗೆ ಬಿಸಿಲಿನಲ್ಲೂ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಅನಿವಾರ್ಯವಾಗಿದೆ. ಬಿಸಿಲಿನ ತಾಪಕ್ಕೆ ತಲೆಯಲ್ಲಿ ಬೆವರು ಧಾರಾಕಾರವಾಗಿ ಸುರಿಯುವುದರಿಂದ, ದ್ವಿಚಕ್ರ ವಾಹನ ಓಡಿಸುವುದೇ
ದೊಡ್ಡ ಸಾಹಸದ ಕೆಲಸವಾಗಿದೆ.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬೇಸಿಗೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯ ತನಕ, ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಲು ಕ್ರಮ
ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…