ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಂಜಾನ್ ಹಬ್ಬದ ಆಚರಣೆಗಾಗಿ ಮುಸ್ಲಿಂ ಸಮುದಾಯದ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಒಂದು ಗಂಟೆ ಕಡಿತಗೊಳಿಸಲು ಅಲ್ಲಿನ ಸರ್ಕಾರ ಆದೇಶ ನೀಡಿದ್ದು, ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ನೌಕರರಿಗೆ ಕೆಲಸದ ಅವಧಿಯಲ್ಲಿ ಸಡಿಲ ನೀಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಮನವಿ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಂದು ಗಂಟೆ ಕಾರ್ಯಾವಽಯನ್ನು ಸಡಿಲಗೊಳಿಸಿದ್ದರೆ, ಕರ್ನಾಟಕದಲ್ಲಿ ಮಾತ್ರ ೨ ತಾಸಿನ ಕಾರ್ಯಾವಧಿಯ ಕಡಿತಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಬೇಡಿಕೆ ಸರಿಯೋ ತಪ್ಪೋ ಎನ್ನುವುದು ಚರ್ಚಾಸ್ಪದ ವಿಷಯವಾಗಿದೆ. ಆದರೆ, ಒಮ್ಮೆ ಇಂತಹ ಬೇಡಿಕೆಗಳಿಗೆ ಸ್ಪಂದಿಸಿದರೆ ಇತರೆ ಸಮುದಾಯ ದವರಿಂದಲೂ ಇಂತಹ ಬೇಡಿಕೆಗಳು ಬರಬಹುದು. ಇದರಿಂದ ಸರ್ಕಾರ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾಗಬಹುದು. ಆದ್ದರಿಂದ ಸರ್ಕಾರ ಈ ಬೇಡಿಕೆಯ ಪೂರ್ವಾಪರ ಚಿಂತಿಸಿ ನಿರ್ಣಯ ಕೈಗೊಳ್ಳ ಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…