ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಂಜಾನ್ ಹಬ್ಬದ ಆಚರಣೆಗಾಗಿ ಮುಸ್ಲಿಂ ಸಮುದಾಯದ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಒಂದು ಗಂಟೆ ಕಡಿತಗೊಳಿಸಲು ಅಲ್ಲಿನ ಸರ್ಕಾರ ಆದೇಶ ನೀಡಿದ್ದು, ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ಮುಸ್ಲಿಂ ಸಮುದಾಯದ ನೌಕರರಿಗೆ ಕೆಲಸದ ಅವಧಿಯಲ್ಲಿ ಸಡಿಲ ನೀಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಮನವಿ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಂದು ಗಂಟೆ ಕಾರ್ಯಾವಽಯನ್ನು ಸಡಿಲಗೊಳಿಸಿದ್ದರೆ, ಕರ್ನಾಟಕದಲ್ಲಿ ಮಾತ್ರ ೨ ತಾಸಿನ ಕಾರ್ಯಾವಧಿಯ ಕಡಿತಕ್ಕೆ ಮನವಿ ಮಾಡಲಾಗಿದೆ. ರಾಜ್ಯ ಸರ್ಕಾರವು ಈ ಬೇಡಿಕೆಗೆ ಸ್ಪಂದಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಬೇಡಿಕೆ ಸರಿಯೋ ತಪ್ಪೋ ಎನ್ನುವುದು ಚರ್ಚಾಸ್ಪದ ವಿಷಯವಾಗಿದೆ. ಆದರೆ, ಒಮ್ಮೆ ಇಂತಹ ಬೇಡಿಕೆಗಳಿಗೆ ಸ್ಪಂದಿಸಿದರೆ ಇತರೆ ಸಮುದಾಯ ದವರಿಂದಲೂ ಇಂತಹ ಬೇಡಿಕೆಗಳು ಬರಬಹುದು. ಇದರಿಂದ ಸರ್ಕಾರ ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾಗಬಹುದು. ಆದ್ದರಿಂದ ಸರ್ಕಾರ ಈ ಬೇಡಿಕೆಯ ಪೂರ್ವಾಪರ ಚಿಂತಿಸಿ ನಿರ್ಣಯ ಕೈಗೊಳ್ಳ ಬೇಕು. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…