ಓದುಗರ ಪತ್ರ
ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ.
ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮೇಲೆ ನಿರುತ್ಸಾಹ ಮೂಡಿದೆ. ಈ ತಂತ್ರಾಂಶಕ್ಕೆ ವಿದ್ಯಾರ್ಥಿಗಳ ದತ್ತಾಂಶಗಳನ್ನು ಅಪ್ಲೋಡ್ ಮಾಡಲು ಅನೇಕ ಸಮಸ್ಯೆಗಳು ಎದುರಾಗಿದ್ದು, ಸರಿಯಾಗಿ ಅಪ್ಲೋಡ್ ಆಗುತ್ತಿಲ್ಲ. ಇದರ ಜತೆಗೆ ಸರ್ವರ್ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿ ಗಳು ತರಗತಿಗಳಿಗಿಂತ ಡೇಟಾ ಎಂಟ್ರಿ ಮಾಡುವಲ್ಲಿಯೇ ಹೆಚ್ಚು ಸಮಯ ಕಳೆಯುವಂತಾಗಿದೆ. ಈ ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಸಂಬಂಧಪಟ್ಟ ವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ತಾಂತ್ರಿಕ ದೋಷದಿಂದಾಗಿ ವಿದ್ಯಾರ್ಥಿಗಳು ಶುಲ್ಕದ ಜತೆಗೆ ದಂಡವನ್ನೂ ಪಾವತಿಸುವಂತಾಗಿದೆ. ಜತೆಗೆ ಪದವಿ ವಿದ್ಯಾರ್ಥಿಗಳಿಗೆ ಫಲಿತಾಂಶ ತಡವಾಗುತ್ತಿದ್ದು, ಉನ್ನತ ಶಿಕ್ಷಣಕ್ಕೆ ತಡೆಯಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ತಂತ್ರಾಂಶದಲ್ಲಿನ ದೋಷವನ್ನು ಸರಿಪಡಿಸಬೇಕಿದೆ.
-ಕೀರ್ತನ ಕುಶಾಲಪ್ಪ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…